ಬ್ರೇಕಿಂಗ್ ನ್ಯೂಸ್
15-02-23 07:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ ನೀಡಿರುವ ಆರೋಪದ ಮೇಲೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸತೀಶ್ ರೆಡ್ಡಿ ಹತ್ಯೆಗೆ ಕುಖ್ಯಾತ ರೌಡಿ ಗ್ಯಾಂಗ್ ಸ್ಕೆಚ್ ಹಾಕಿದ್ದ ಸ್ಫೋಟಕ ವಿಷಯ ಬಹಿರಂಗಗೊಂಡಿದೆ. ನಗರದ ವಿಲ್ಸನ್ ಗಾರ್ಡನ್ ನಾಗನ ತಂಡ ಶಾಸಕನ ಹತ್ಯೆಗೆ 2 ಕೋಟಿಗೆ ಸುಪಾರಿ ಪಡೆದಿದ್ದು ಶಾಸಕರ ಚಲನವಲನಗಳ ಬಗ್ಗೆ ನಿಗಾವಹಿಸಿದ್ದರು. ಆದರೆ ದಾಳಿಗೂ ಮುಂಚೆ ರೌಡಿಶೀಟರ್ ನಾಗನ ತಂಡದಿಂದಲೇ ವಿಷಯ ಬಹಿರಂಗಗೊಂಡಿದೆ.
ನಾಗನ ತಂಡದಲ್ಲಿದ್ದ ಚಿತ್ರದುರ್ಗದ ಮೂಲದ ಆಕಾಶ್ ಕೊಲೆಯ ಸುಳಿವು ಬಿಟ್ಟು ಕೊಟ್ಟಿದ್ದಾನೆ. ಸತೀಶ್ ರೆಡ್ಡಿ ಬೆಂಬಲಿಗ ಚಂದ್ರು ಕರೆ ಮಾಡಿದ್ದಾಗ ಆಕಾಶ್ ಕೊಲೆಯ ಸಂಚು ಬಾಯ್ಬಿಟ್ಟಿದ್ದಾನೆ. ನಂತರ ಎಚ್ಚೆತ್ತ ಶಾಸಕರು ಪೊಲೀಸರಿಗೆ ದೂರು ನೀಡಿದ್ದಾರೆ.
ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ರೌಡಿ ನಾಗನ ತಂಡ ಎಸ್ಕೇಪ್ ಆಗಿದೆ. ರೌಡಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಿವಾಸದ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಫಾರ್ಚೂನರ್ ಕಾರು ಹಾಗೂ ಮಹೀಂದ್ರಾ ಥಾರ್ ಜೀಪ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ರಾಜ್ಯ ರಾಜಕೀಯದಲ್ಲೂ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೇ ದಿನಗಳಲ್ಲಿ ಆರೋಪಿಗಳ ಬಂಧನ ಆಗಿತ್ತು. ನಾಲ್ವರು ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ತಂದು ಎರಡು ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಹತ್ಯೆ ಸುಪಾರಿ ಬಗ್ಗೆ ವಿಧಾನಸೌಧದಲ್ಲಿ ಸತೀಶ್ ರೆಡ್ಡಿ ಮಾತನಾಡಿ, ನನಗೆ ಮಂಗಳವಾರ ಸಂಜೆ ಪೊಲೀಸರು ಈ ಬಗ್ಗೆ ತಿಳಿಸಿದರು. ಈಗ ಚುನಾವಣೆ ಇದೆ, ರಾಜಕೀಯ ಕಾರಣಗಳೂ ಇರಬಹುದು. ಈ ವಿವಾರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೆ ತಿಳಿಸಿದ್ದೇನೆ. ಬೆದರಿಕೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಪಡೆದುಕೊಳ್ಳಲು ಸಿಎಂ ಸೂಚಿಸಿದರು. ಆದರೆ ನನಗೆ ಭದ್ರತೆ ಬೇಡ ಅಂದಿದ್ದೇನೆ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ . ನಾನು ಭಯ ಪಡುವುದಿಲ್ಲ. ಸುಪಾರಿ ಹಿಂದೆ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶವೂ ಇರಬಹುದು. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ತಾರೆ. ಆರೋಪಿಗಳು ನನ್ನ ಚಲನವಲನ ಮೇಲೆ ಗಮನ ಇಟ್ಟಿದ್ದರಂತೆ. ಅವರು ಎಲ್ಲೆಲ್ಲಿ ಓಡಾಡಿದ್ದಾರೆ, ಏನೇನು ಮಾಡಿದ್ದಾರೆ ಅಂತ ಪೊಲೀಸರು ಮಾಹಿತಿ ಪಡ್ಕೊಂಡಿದ್ದಾರೆ ಎಂದು ತಿಳಿಸಿದರು.
Plot to Murder bangalore MLA Satish Reddy, killers master plan leaked, two arrested. Wilson garden Rowdy shetter was given two crores to murder MLA.
20-09-24 11:01 pm
HK News Desk
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
20-09-24 07:39 pm
HK News Desk
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
20-09-24 11:08 pm
Mangalore Correspondent
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
Mangalore, Union Bank of India: ಅಂಬೇಡ್ಕರ್ ವೃತ...
20-09-24 06:56 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am