ಬ್ರೇಕಿಂಗ್ ನ್ಯೂಸ್
15-02-23 09:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15 : ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ವಿರುದ್ಧ ಬೆಂಗಳೂರಿನ ಕೋರ್ಟ್ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನ ವಾರಂಟ್ ಜಾರಿಗೊಳಿಸಿದೆ.
ಸಿ.ಎಸ್.ಸೋಮೇಗೌಡ ಎನ್ನುವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್, ವೈಎಸ್ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಕೋರ್ಟ್ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಅವರು ಮಾರ್ಚ್ 27ಕ್ಕೆ ದತ್ತಾ ಅವರನ್ನು ಕೋರ್ಟ್ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಿದ್ದಾರೆ.
ಉದ್ಯಮಿ ಸಿ.ಎಸ್. ಸೋಮೇಗೌಡರಿಗೆ ದತ್ತಾ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಸಾಲ ಪಡೆದಿದ್ದ ದತ್ತಾ ಅದಕ್ಕೆ ಬದಲಾಗಿ ಚೆಕ್ ನೀಡಿದ್ದರು. ಆದರೆ ಅದು ಅನೂರ್ಜಿತವಾಗಿದ್ದು ದತ್ತಾ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದರಿಂದ ದತ್ತಾ ಕೋರ್ಟ್ ಗೆ ಹಾಜರಾಗುವುದು ಅನಿವಾರ್ಯವಾಗುತ್ತದೆ. ಜೆಡಿಎಸ್ ವಕ್ತಾರರಾಗಿ ಕಾರ್ಯ ನಿರ್ವಹಿಸಿದ್ದ ದತ್ತಾ, ಜೆಡಿಎಸ್ ವರಿಷ್ಠ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ, ಇತ್ತೀಚೆಗೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದು, ಕಡೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ದತ್ತಾ ಸರಳ, ಸಜ್ಜನ ರಾಜಕಾರಣಿ ಎಂದೇ ಹೆಸರು ಪಡೆದುಕೊಂಡಿದ್ದಾರೆ.
Special court issues arrest warrant against YSV Datta in cheque bounce case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm