ಬ್ರೇಕಿಂಗ್ ನ್ಯೂಸ್
17-02-23 08:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.17 : ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆಗೆ ಬರುವ ಮೊದಲೇ ಸದನಕ್ಕೆ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಟುಕೊಂಡು ಸದನ ಆಗಮಿಸಿದ್ದರು. ಕೇಸರಿ ಬಣ್ಣದ ಹೂವುಗಳನ್ನು ಇಟ್ಟುಕೊಂಡು ಡಿಕೆ ಶಿವಕುಮಾರ್ ಸದನಕ್ಕೆ ಪ್ರವೇಶ ಮಾಡುತ್ತಲೇ ಎಲ್ಲರ ಆಕರ್ಷಣೆಗೆ ಕಾರಣವಾದರು. ಮಾಜಿ ಸಿಎಂ ಸಿದ್ಧರಾಮಯ್ಯ ಅವರೂ ಕಿವಿ ಮೇಲೆ ಹೂವು ಇಟ್ಟುಕೊಂಡು ಬಂದಿದ್ದರು. ಇದೇ ವಿಚಾರ ಸದನದಲ್ಲಿ ಬಜೆಟ್ ಮಂಡನೆ ಆಗುವ ಮೊದಲೇ ಗದ್ದಲಕ್ಕೆ ಕಾರಣವಾಯ್ತು.
ಸಿಎಂ ಬೊಮ್ಮಾಯಿ ಈ ಬಗ್ಗೆ ಪ್ರತಿಕ್ರಿಯಿಸಿ, ಇಷ್ಟು ದಿನ ಕಾಂಗ್ರೆಸ್ ನಾಯಕರು ಜನರ ಕಿವಿ ಮೇಲೆ ಹೂ ಇಟ್ಟಿದ್ದರು. ಈಗ ಅವರೇ ಕಿವಿ ಮೇಲೆ ಹೂವು ಇಟ್ಟುಕೊಂಡಿದ್ದಾರೆ. ಮುಂದೆ ಜನರೇ ಇವರ ಕಿವಿ ಮೇಲೆ ಹೂ ಇಡುತ್ತಾರೆ ಎಂದು ಛೇಡಿಸಿದರು. ಬೊಮ್ಮಾಯಿ ಮಾತಿಗೆ ಗರಂ ಆದ ಸಿದ್ದರಾಮಯ್ಯ, ನೀವು ಜನರ ಕಿವಿ ಮೇಲೆ ಹೂವಿಡುತ್ತಿದ್ದೀರಿ. ಈ ಬಜೆಟ್ ಮೂಲಕ 7 ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದ್ದಾರೆ ಎಂದು ತಿಳಿಸಲು ನಾವು ಹೂ ಇಟ್ಟುಕೊಂಡು ಬಂದಿದ್ದೇವೆ ಎಂದು ಸರ್ಕಾರದ ವಿರುದ್ಧ ಸಿಟ್ಟು ಹೊರ ಹಾಕಿದರು.



ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಭಾರೀ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದರಿಂದ ಬಜೆಟ್ ಮಂಡನೆಗೂ ಮೊದಲೇ ಗದ್ದಲ ಉಂಟಾಯಿತು. ಈ ಸಂದರ್ಭದಲ್ಲಿ ಸ್ಪೀಕರ್ ಕಾಗೇರಿ, ಇಷ್ಟು ದಿನ ಸಿದ್ದರಾಮಯ್ಯ ಕೇಸರಿ ಬಣ್ಣ ನಿಮ್ಮ ಪಕ್ಷದ್ದು ಎನ್ನುತ್ತಿದ್ದರು. ಆದರೆ ಇಂದು ಕೇಸರಿ ಬಣ್ಣದ ಹೂ ಇಟ್ಟುಕೊಂಡು ಬಂದಿದ್ದಾರೆ ಎಂದು ಹೇಳಿ ಕಾಲೆಳೆದರು. ಕೊನೆಗೆ ಸ್ಪೀಕರ್ ಎರಡೂ ಕಡೆಯ ಸದಸ್ಯರನ್ನು ಸಮಾಧಾನ ಪಡಿಸಿ ಬಜೆಟ್ ಮಂಡನೆಗೆ ಅವಕಾಶ ಕಲ್ಪಿಸಿದರು.
In a peculiar protest against the ruling Bharatiya Janata Party in Karnataka, Opposition leader Siddaramaiah and other Congress leaders came to the state Assembly wearing flowers behind their ears, alleging that the BJP government has cheated people and made them fools by not fulfilling promises from the previous budget and the 2018 manifesto. Chief Minister Basvaraj Bommai, who also holds the finance portfolio, is today presenting his second, and his government's last, budget before the upcoming state elections, scheduled for May this year.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm