ಬ್ರೇಕಿಂಗ್ ನ್ಯೂಸ್
19-02-23 08:34 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ರೂಪಾ ಅವರು ಮಾಡಿರುವ ಸಾಲು ಸಾಲು ಆರೋಪಗಳಿಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಿರುಗೇಟು ನೀಡಿದ್ದು, ರೂಪಾ ಅವರಿಗೆ ಮಾನಸಿಕ ಕಾಯಿಲೆ ಎಂದಿದ್ದಾರೆ.
ʻʻಮಾನಸಿಕ ಕಾಯಿಲೆ ಬಹುದೊಡ್ಡ ಪ್ರಾಬ್ಲಮ್. ಇದಕ್ಕೆ ಔಷಧ ಹಾಗು ಕೌನ್ಸೆಲಿಂಗ್ ಅವಶ್ಯಕತೆಯಿದೆ. ಜವಾಬ್ದಾರಿ ಸ್ಥಾನದಲ್ಲಿರೋರಿಗೆ ಈ ತರಹದ ಪ್ರಾಬ್ಲಮ್ ಬಂದರೆ ಡೇಂಜರ್ ಅದು. ಐಪಿಎಸ್ ಅಧಿಕಾರಿ ರೂಪಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆʼʼ ಎಂದು ರೋಹಿಣಿ ಸಿಂಧೂರಿ ಅವರು ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ʻʻನನ್ನ ಮೇಲೆ ಹಬ್ಬಿಸುತ್ತಿರುವ ಸುಳ್ಳು ಆಪಾದನೆಗಳೆಲ್ಲ ವ್ಯವಸ್ಥಿತ ಪಿತೂರಿ. ಈಕೆ ಎಲ್ಲಾ ಕಡೆಯೂ ಹೀಗೆ ಸುಳ್ಳು ಆಪಾದನೆಗಳನ್ನು ಹಬ್ಬಿಸಿರುತ್ತಾರೆ. ಸದ್ಯ ಈಗ ಕೆಲಸ ಮಾಡುತ್ತಿರುವ ನಾನ್ ಕೇಡರ್ ಪೋಸ್ಟ್ ನಲ್ಲೂ ಕೂಡಾ ಅವರು ಇಂಥಹುದೇ ಕಿರಿಕ್ ಮಾಡಿಕೊಂಡಿದ್ದಾರೆʼʼ ಎಂದು ಹೇಳಿದ್ದಾರೆ.

ರೂಪಾ ಅವರು ಮಾಡಿರುವ ಆರೋಪ, ಮಾನಹಾನಿ ಸಂಗತಿಗಳಿಗೆ ಐಪಿಸಿ ಸೆಕ್ಷನ್ ಅಡಿ ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿರುವವರು ವೈಯಕ್ತಿಕ ಹಗೆಯನ್ನು ಸಾಧಿಸಲು ಹೊರಡುವುದು ಸಮಾಜಕ್ಕೆ ಬಹಳಷ್ಟು ಅಪಾಯಕಾರಿ. ರೂಪಾ ಐಪಿಎಸ್ ಅವರು, ಜವಾಬ್ದಾರಿಯುತ ಸ್ಥಾನದಲ್ಲಿದ್ದು, ನನ್ನ ಮೇಲೆ ವೈಯಕ್ತಿಕ ಹಗೆಯನ್ನು ಸಾಧಿಸಲು ಮಾನಸಿಕ ಸ್ಥಿಮಿತೆಯನ್ನು ಕಳೆದುಕೊಂಡಿರುವವರ ರೀತಿಯಲ್ಲಿ ಆಡುತ್ತಿದ್ದಾರೆ.
ಐಪಿಎಸ್ ರೂಪಾ ಅವರದ್ದು, ಇದೊಂದು ಅಭ್ಯಾಸವಾಗಿ ಬಿಟ್ಟಿದೆ. ಅವರು ಇತ್ತೀಚಿನ ವರ್ಷಗಳಲ್ಲಿದ್ದ ಎಲ್ಲಾ ಹುದ್ದೆಗಳಲ್ಲಿ ಇದೇ ರೀತಿಯ ಆರೋಪ ರಹಿತ ಆಧಾರ ರಹಿತ ಆರೋಪಗಳನ್ನು ಮಾಡುವ ಮೂಲಕ ಮಾಧ್ಯಮಗಳ ಗಮನ ಸೆಳೆಯುವ ಹಾಗೂ ತಾವು ದ್ವೇ಼ಷಿಸುವ ವ್ಯಕ್ತಿಗಳ ಮೇಲೆ ವೈಯಕ್ತಿಕವಾಗಿ ಹಗೆತನ ಸಾಧಿಸಲು ಪ್ರಯತ್ನಿಸುತ್ತಾರೆ. ಅವರು ಯಾವಾಗಲೂ ಸುದ್ದಿಯಲ್ಲಿರಬೇಕು ಎನ್ನುವುದನ್ನ ಬಯಸುತ್ತಾರೆ ಹಾಗೂ ಅದಕ್ಕೆ ಬೇಕಾದಂತಹ ಪೋಸ್ಟ್ಗಳನ್ನು ತಮ್ಮ ಸಾಮಾಜಿಕ ಮಾಧ್ಯಮದ ಪುಟಗಳಲ್ಲಿ ಹಾಕುವ ಮೂಲಕ ಸುದ್ದಿಯ ಕೇಂದ್ರಬಿಂದುವಾಗುತ್ತಾರೆ.
ಜವಾಬ್ದಾರಿಯುತ ಸ್ಥಾನದಲ್ಲಿದ್ದು ಒಳ್ಳೆಯ ಕೆಲಸಗಳ ಕಡೆ ಗಮನ ಹರಿಸುವುದನ್ನ ಬಿಟ್ಟು ಒಬ್ಬ ವ್ಯಕ್ತಿ ಅಥವಾ ಇನ್ನೊಬ್ಬರನ್ನ ಗುರಿಯಾಗಿಸಿಕೊಂಡು ಅವರ ತೇಜೋವಧೆ ಮಾಡುವುದೇ ಅವರ ಪ್ರಾಥಮಿಕ ಕೆಲಸ ಎಂದು ತೋರಿಸುತ್ತದೆ. ಅದರಲ್ಲೂ ನನ್ನ ವಿರುದ್ದ ಯಾವುದೋ ವೈಯಕ್ತಿಕ ಹಗೆಯನ್ನಿಟ್ಟುಕೊಂಡು ಸುಳ್ಳು, ವೈಯಕ್ತಿಕ ನಿಂದನೆಯ ಅಭಿಯಾನವನ್ನು ನಡೆಸುತ್ತಿದ್ದಾರೆ.
![]()

ನನ್ನ ಸಾಮಾಜಿಕ ಮಾಧ್ಯಮಗಳಿಂದ ಹಾಗೂ ವಾಟ್ಸ್ ಆಪ್ ಸ್ಟೇಟಸ್ಗಳಿಂದ ಸ್ಕ್ರೀನ್ ಶಾಟ್ಗಳ ಮೂಲಕ ಸಂಗ್ರಹಿಸಿರುವ ಫೋಟೋಗಳನ್ನ ನನ್ನ ತೇಜೋವಧೆ ಮಾಡಲು ರೂಪಾ ಐಪಿಎಸ್ ಅವರು ಬಳಸಿದ್ದಾರೆ. ಈ ಫೋಟೋಗಳನ್ನು ನಾನು ಕಳುಹಿಸಿದ್ದೇನೆ ಎನ್ನುವ ಅಧಿಕಾರಿಗಳ ಹೆಸರನ್ನ ಬಹಿರಂಗಪಡಿಸಬೇಕು ಹಾಗೂ ಅವುಗಳ ಬಗ್ಗೆ ತನಿಖೆ ನಡೆಯಬೇಕು ಎನ್ನುವುದನ್ನ ನಾನು ಆಗ್ರಹಿಸುತ್ತೇನೆ
ನನ್ನ ವಿರುದ್ದ ರೂಪಾ ಐಪಿಎಸ್ ಅವರು ನಡೆಸುತ್ತಿರುವ ವೈಯಕ್ತಿಕ ನಿಂದನೆ ಹಾಗೂ ತೇಜೋವಧೆಯ ವಿರುದ್ದ ನಾನು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ರೂಪಾ ಐಪಿಎಸ್ ಅವರ ಮೇಲೆ ಕಾನೂನಿನ ಎಲ್ಲಾ ಕ್ರಮಗಳನ್ನ ಕೈಗೊಳ್ಳುತ್ತೇನೆ. ಸಕ್ಷಮ ಪ್ರಾಧಿಕಾರದ ಮುಂದೆಯೂ ದೂರನ್ನ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ ರೋಹಿಣಿ ಸಿಂಧೂರಿ.
IAS Sindhuri IAS Roopa fight, Sindhuri slams roopa, says shes mentally ill, will take action against Roopa for his deformative remarks against me in the media she added. Roopa has made lies as her profession she added.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm