ಬ್ರೇಕಿಂಗ್ ನ್ಯೂಸ್
19-02-23 08:34 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ರೂಪಾ ಅವರು ಮಾಡಿರುವ ಸಾಲು ಸಾಲು ಆರೋಪಗಳಿಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಿರುಗೇಟು ನೀಡಿದ್ದು, ರೂಪಾ ಅವರಿಗೆ ಮಾನಸಿಕ ಕಾಯಿಲೆ ಎಂದಿದ್ದಾರೆ.
ʻʻಮಾನಸಿಕ ಕಾಯಿಲೆ ಬಹುದೊಡ್ಡ ಪ್ರಾಬ್ಲಮ್. ಇದಕ್ಕೆ ಔಷಧ ಹಾಗು ಕೌನ್ಸೆಲಿಂಗ್ ಅವಶ್ಯಕತೆಯಿದೆ. ಜವಾಬ್ದಾರಿ ಸ್ಥಾನದಲ್ಲಿರೋರಿಗೆ ಈ ತರಹದ ಪ್ರಾಬ್ಲಮ್ ಬಂದರೆ ಡೇಂಜರ್ ಅದು. ಐಪಿಎಸ್ ಅಧಿಕಾರಿ ರೂಪಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆʼʼ ಎಂದು ರೋಹಿಣಿ ಸಿಂಧೂರಿ ಅವರು ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ʻʻನನ್ನ ಮೇಲೆ ಹಬ್ಬಿಸುತ್ತಿರುವ ಸುಳ್ಳು ಆಪಾದನೆಗಳೆಲ್ಲ ವ್ಯವಸ್ಥಿತ ಪಿತೂರಿ. ಈಕೆ ಎಲ್ಲಾ ಕಡೆಯೂ ಹೀಗೆ ಸುಳ್ಳು ಆಪಾದನೆಗಳನ್ನು ಹಬ್ಬಿಸಿರುತ್ತಾರೆ. ಸದ್ಯ ಈಗ ಕೆಲಸ ಮಾಡುತ್ತಿರುವ ನಾನ್ ಕೇಡರ್ ಪೋಸ್ಟ್ ನಲ್ಲೂ ಕೂಡಾ ಅವರು ಇಂಥಹುದೇ ಕಿರಿಕ್ ಮಾಡಿಕೊಂಡಿದ್ದಾರೆʼʼ ಎಂದು ಹೇಳಿದ್ದಾರೆ.

ರೂಪಾ ಅವರು ಮಾಡಿರುವ ಆರೋಪ, ಮಾನಹಾನಿ ಸಂಗತಿಗಳಿಗೆ ಐಪಿಸಿ ಸೆಕ್ಷನ್ ಅಡಿ ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿರುವವರು ವೈಯಕ್ತಿಕ ಹಗೆಯನ್ನು ಸಾಧಿಸಲು ಹೊರಡುವುದು ಸಮಾಜಕ್ಕೆ ಬಹಳಷ್ಟು ಅಪಾಯಕಾರಿ. ರೂಪಾ ಐಪಿಎಸ್ ಅವರು, ಜವಾಬ್ದಾರಿಯುತ ಸ್ಥಾನದಲ್ಲಿದ್ದು, ನನ್ನ ಮೇಲೆ ವೈಯಕ್ತಿಕ ಹಗೆಯನ್ನು ಸಾಧಿಸಲು ಮಾನಸಿಕ ಸ್ಥಿಮಿತೆಯನ್ನು ಕಳೆದುಕೊಂಡಿರುವವರ ರೀತಿಯಲ್ಲಿ ಆಡುತ್ತಿದ್ದಾರೆ.
ಐಪಿಎಸ್ ರೂಪಾ ಅವರದ್ದು, ಇದೊಂದು ಅಭ್ಯಾಸವಾಗಿ ಬಿಟ್ಟಿದೆ. ಅವರು ಇತ್ತೀಚಿನ ವರ್ಷಗಳಲ್ಲಿದ್ದ ಎಲ್ಲಾ ಹುದ್ದೆಗಳಲ್ಲಿ ಇದೇ ರೀತಿಯ ಆರೋಪ ರಹಿತ ಆಧಾರ ರಹಿತ ಆರೋಪಗಳನ್ನು ಮಾಡುವ ಮೂಲಕ ಮಾಧ್ಯಮಗಳ ಗಮನ ಸೆಳೆಯುವ ಹಾಗೂ ತಾವು ದ್ವೇ಼ಷಿಸುವ ವ್ಯಕ್ತಿಗಳ ಮೇಲೆ ವೈಯಕ್ತಿಕವಾಗಿ ಹಗೆತನ ಸಾಧಿಸಲು ಪ್ರಯತ್ನಿಸುತ್ತಾರೆ. ಅವರು ಯಾವಾಗಲೂ ಸುದ್ದಿಯಲ್ಲಿರಬೇಕು ಎನ್ನುವುದನ್ನ ಬಯಸುತ್ತಾರೆ ಹಾಗೂ ಅದಕ್ಕೆ ಬೇಕಾದಂತಹ ಪೋಸ್ಟ್ಗಳನ್ನು ತಮ್ಮ ಸಾಮಾಜಿಕ ಮಾಧ್ಯಮದ ಪುಟಗಳಲ್ಲಿ ಹಾಕುವ ಮೂಲಕ ಸುದ್ದಿಯ ಕೇಂದ್ರಬಿಂದುವಾಗುತ್ತಾರೆ.
ಜವಾಬ್ದಾರಿಯುತ ಸ್ಥಾನದಲ್ಲಿದ್ದು ಒಳ್ಳೆಯ ಕೆಲಸಗಳ ಕಡೆ ಗಮನ ಹರಿಸುವುದನ್ನ ಬಿಟ್ಟು ಒಬ್ಬ ವ್ಯಕ್ತಿ ಅಥವಾ ಇನ್ನೊಬ್ಬರನ್ನ ಗುರಿಯಾಗಿಸಿಕೊಂಡು ಅವರ ತೇಜೋವಧೆ ಮಾಡುವುದೇ ಅವರ ಪ್ರಾಥಮಿಕ ಕೆಲಸ ಎಂದು ತೋರಿಸುತ್ತದೆ. ಅದರಲ್ಲೂ ನನ್ನ ವಿರುದ್ದ ಯಾವುದೋ ವೈಯಕ್ತಿಕ ಹಗೆಯನ್ನಿಟ್ಟುಕೊಂಡು ಸುಳ್ಳು, ವೈಯಕ್ತಿಕ ನಿಂದನೆಯ ಅಭಿಯಾನವನ್ನು ನಡೆಸುತ್ತಿದ್ದಾರೆ.
![]()

ನನ್ನ ಸಾಮಾಜಿಕ ಮಾಧ್ಯಮಗಳಿಂದ ಹಾಗೂ ವಾಟ್ಸ್ ಆಪ್ ಸ್ಟೇಟಸ್ಗಳಿಂದ ಸ್ಕ್ರೀನ್ ಶಾಟ್ಗಳ ಮೂಲಕ ಸಂಗ್ರಹಿಸಿರುವ ಫೋಟೋಗಳನ್ನ ನನ್ನ ತೇಜೋವಧೆ ಮಾಡಲು ರೂಪಾ ಐಪಿಎಸ್ ಅವರು ಬಳಸಿದ್ದಾರೆ. ಈ ಫೋಟೋಗಳನ್ನು ನಾನು ಕಳುಹಿಸಿದ್ದೇನೆ ಎನ್ನುವ ಅಧಿಕಾರಿಗಳ ಹೆಸರನ್ನ ಬಹಿರಂಗಪಡಿಸಬೇಕು ಹಾಗೂ ಅವುಗಳ ಬಗ್ಗೆ ತನಿಖೆ ನಡೆಯಬೇಕು ಎನ್ನುವುದನ್ನ ನಾನು ಆಗ್ರಹಿಸುತ್ತೇನೆ
ನನ್ನ ವಿರುದ್ದ ರೂಪಾ ಐಪಿಎಸ್ ಅವರು ನಡೆಸುತ್ತಿರುವ ವೈಯಕ್ತಿಕ ನಿಂದನೆ ಹಾಗೂ ತೇಜೋವಧೆಯ ವಿರುದ್ದ ನಾನು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ರೂಪಾ ಐಪಿಎಸ್ ಅವರ ಮೇಲೆ ಕಾನೂನಿನ ಎಲ್ಲಾ ಕ್ರಮಗಳನ್ನ ಕೈಗೊಳ್ಳುತ್ತೇನೆ. ಸಕ್ಷಮ ಪ್ರಾಧಿಕಾರದ ಮುಂದೆಯೂ ದೂರನ್ನ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ ರೋಹಿಣಿ ಸಿಂಧೂರಿ.
IAS Sindhuri IAS Roopa fight, Sindhuri slams roopa, says shes mentally ill, will take action against Roopa for his deformative remarks against me in the media she added. Roopa has made lies as her profession she added.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm