ಬ್ರೇಕಿಂಗ್ ನ್ಯೂಸ್
19-02-23 09:39 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಬಹಿರಂಗ ಜಟಾಪಟಿಗೆ ಈಗ, ಆತ್ಮಹತ್ಯೆ ಮಾಡಿಕೊಂಡ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಪತ್ನಿ ಕುಸುಮಾ ಎಂಟ್ರಿ ಕೊಟ್ಟಿದ್ದಾರೆ.
ರೂಪಾ ಅವರು ಸಿಂಧೂರಿ ಅವರ ವಿರುದ್ಧ 19 ಗಂಭೀರ ಆರೋಪಗಳನ್ನು ಮಾಡಿದ್ದರು. ಅದರಲ್ಲಿ ಡಿ.ಕೆ. ರವಿ ಸಾವಿನ ವಿಚಾರವೂ ಸೇರಿತ್ತು. ಡಿ.ಕೆ. ರವಿ ಮತ್ತು ರೋಹಿಣಿ ಸಿಂಧೂರಿ ನಡುವೆ ಪ್ರೇಮ ಸಲ್ಲಾಪ ನಡೆಯುತ್ತಿತ್ತು ಎನ್ನುವುದೂ ಸೇರಿದಂತೆ ಹಲವು ವಿಚಾರಗಳನ್ನು ಪೋಸ್ಟ್ ಮಾಡಿದ್ದಾರೆ.
ʻʻನನ್ನ ಪ್ರಶ್ನೆ ಇಷ್ಟೇ. ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ ಸಿಬಿಐ ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ. ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ? ಅಂದರೆ ಉತ್ತೇಜನ ಕೊಟ್ಟಂತೆ ಅಲ್ಲವೇ? ಅದೇ ರೀತಿ ಐಎಎಸ್ ಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿʼʼ ಎಂದು ಕೇಳಿದ್ದಾರೆ.
ಈ ಎಲ್ಲಾ ನಾಟಕಗಳನ್ನು ದೂರದಿಂದಲೇ ನೋಡುತ್ತಿದ್ದ ಡಿ.ಕೆ. ರವಿ ಪತ್ನಿ ಕುಸುಮಾ ಅವರು ಯಾವ ವಿಚಾರವನ್ನೂ ಉಲ್ಲೇಖ ಮಾಡದೆ ಒಂದು ಕಮೆಂಟ್ನ್ನು ಟ್ವೀಟ್ ಮೂಲಕ ತನ್ನ ಟ್ವಿಟ್ಟರ್ ಖಾತೆಯಲ್ಲಿ ʻKarma will get back to you, sooner or later it surely willʼ ಎಂದು ಟ್ವೀಟ್ ಮಾಡಿದ್ದಾರೆ ಕುಸುಮಾ. ʻʻತಾನು ಮಾಡಿದ ಪಾಪವು ತನಗೇ ವಾಪಸ್ ಬರುತ್ತದೆ, ತಕ್ಷಣಕ್ಕೆ ಆಗಬಹುದು ಅಥವಾ ತಡವಾಗಬಹುದು.. ಆದರೆ ಖಂಡಿತಾ ಬಂದೇ ಬರುತ್ತದೆʼʼ ಎಂದು ಟ್ವೀಟ್ ಮಾಡಿದ್ದಾರೆ. ಜತೆಗೆ ಇನ್ನೊಂದು ಹೇಳಿಕೆಯಲ್ಲಿ ಡಿ. ರೂಪಾ ಅವರ ಹೇಳಿಕೆಗೆ ಸಹಮತವಿದೆ ಎಂದಿದ್ದಾರೆ.
A war has started between women IAS-IPS in Karnataka. IPS officer D. Roopa has issued a 19-point charge sheet against IAS officer Rohini Sindhuri. Rohini Sindhuri has responded to Roopa’s allegations and said that she is personally harassing me. As the talk war between the two intensified, Kusuma Hanumantharayappa, wife of late IAS officer DK Ravi, Congress leader Kusuma Hanumantharayappa made an entry.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm