ಬ್ರೇಕಿಂಗ್ ನ್ಯೂಸ್
19-02-23 09:39 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಬಹಿರಂಗ ಜಟಾಪಟಿಗೆ ಈಗ, ಆತ್ಮಹತ್ಯೆ ಮಾಡಿಕೊಂಡ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಪತ್ನಿ ಕುಸುಮಾ ಎಂಟ್ರಿ ಕೊಟ್ಟಿದ್ದಾರೆ.
ರೂಪಾ ಅವರು ಸಿಂಧೂರಿ ಅವರ ವಿರುದ್ಧ 19 ಗಂಭೀರ ಆರೋಪಗಳನ್ನು ಮಾಡಿದ್ದರು. ಅದರಲ್ಲಿ ಡಿ.ಕೆ. ರವಿ ಸಾವಿನ ವಿಚಾರವೂ ಸೇರಿತ್ತು. ಡಿ.ಕೆ. ರವಿ ಮತ್ತು ರೋಹಿಣಿ ಸಿಂಧೂರಿ ನಡುವೆ ಪ್ರೇಮ ಸಲ್ಲಾಪ ನಡೆಯುತ್ತಿತ್ತು ಎನ್ನುವುದೂ ಸೇರಿದಂತೆ ಹಲವು ವಿಚಾರಗಳನ್ನು ಪೋಸ್ಟ್ ಮಾಡಿದ್ದಾರೆ.

ʻʻನನ್ನ ಪ್ರಶ್ನೆ ಇಷ್ಟೇ. ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ ಸಿಬಿಐ ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ. ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ? ಅಂದರೆ ಉತ್ತೇಜನ ಕೊಟ್ಟಂತೆ ಅಲ್ಲವೇ? ಅದೇ ರೀತಿ ಐಎಎಸ್ ಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿʼʼ ಎಂದು ಕೇಳಿದ್ದಾರೆ.

ಈ ಎಲ್ಲಾ ನಾಟಕಗಳನ್ನು ದೂರದಿಂದಲೇ ನೋಡುತ್ತಿದ್ದ ಡಿ.ಕೆ. ರವಿ ಪತ್ನಿ ಕುಸುಮಾ ಅವರು ಯಾವ ವಿಚಾರವನ್ನೂ ಉಲ್ಲೇಖ ಮಾಡದೆ ಒಂದು ಕಮೆಂಟ್ನ್ನು ಟ್ವೀಟ್ ಮೂಲಕ ತನ್ನ ಟ್ವಿಟ್ಟರ್ ಖಾತೆಯಲ್ಲಿ ʻKarma will get back to you, sooner or later it surely willʼ ಎಂದು ಟ್ವೀಟ್ ಮಾಡಿದ್ದಾರೆ ಕುಸುಮಾ. ʻʻತಾನು ಮಾಡಿದ ಪಾಪವು ತನಗೇ ವಾಪಸ್ ಬರುತ್ತದೆ, ತಕ್ಷಣಕ್ಕೆ ಆಗಬಹುದು ಅಥವಾ ತಡವಾಗಬಹುದು.. ಆದರೆ ಖಂಡಿತಾ ಬಂದೇ ಬರುತ್ತದೆʼʼ ಎಂದು ಟ್ವೀಟ್ ಮಾಡಿದ್ದಾರೆ. ಜತೆಗೆ ಇನ್ನೊಂದು ಹೇಳಿಕೆಯಲ್ಲಿ ಡಿ. ರೂಪಾ ಅವರ ಹೇಳಿಕೆಗೆ ಸಹಮತವಿದೆ ಎಂದಿದ್ದಾರೆ.
A war has started between women IAS-IPS in Karnataka. IPS officer D. Roopa has issued a 19-point charge sheet against IAS officer Rohini Sindhuri. Rohini Sindhuri has responded to Roopa’s allegations and said that she is personally harassing me. As the talk war between the two intensified, Kusuma Hanumantharayappa, wife of late IAS officer DK Ravi, Congress leader Kusuma Hanumantharayappa made an entry.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm