ಬ್ರೇಕಿಂಗ್ ನ್ಯೂಸ್
22-02-23 03:02 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22 : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ನಾಗ್ಗೂ ರಾಜಕೀಯಕ್ಕೂ ಹಳೆಯ ನಂಟು ಇದೆ. ಆದರೆ, ಕೆಲವು ವರ್ಷಗಳಿಂದ ರಾಜಕೀಯದಿಂದ ದೂರ ಉಳಿದಿದ್ದರು. ಈಗ ಮತ್ತೆ ರಾಜಕೀಯ ಕಡೆಗೆ ಒಲವು ತೋರಿದ್ದಾರೆ.
ಹಿರಿಯ ನಟ ಅನಂತ್ನಾಗ್ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಇಂದು ಸಂಜೆ 4.30ಕ್ಕೆ ಸೇರಲಿದ್ದಾರೆ. ಇವರೊಂದಿಗೆ ಸಚಿವರಾದ ಮುನಿರತ್ನ, ಡಾ.ಸುಧಾಕರ್ ಸೇರಿದಂತೆ ಇನ್ನಿತರ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಅನಂತ್ನಾಗ್ ಚುನಾವಣೆ ಹಿನ್ನೆಲೆ ಏನು?
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಯೇ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿದೆ. ಕೆಲವು ರಾಜಕೀಯ ಮುಖಂಡರು ಪಕ್ಷ ಬದಲಾವಣೆ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಹೊಸಬರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕೆಲಸನೂ ನಡೆಯುತ್ತಿದೆ. ಇದೇ ವೇಳೆ ಅನಂತ್ನಾಗ್ ಬಿಜೆಪಿ ಸೇರುತ್ತಿರೋದು ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಅನಂತ್ನಾಗ್ ಮುಂದಿನ ನಡೆಯೇನು?
ಅನಂತ್ನಾಗ್ ಈಗ ಬಿಜೆಪಿ ಸೇರ್ಪಡೆಯಾಗುತ್ತಿರೋದು ರಾಜಕೀಯ ವಲಯದಲ್ಲಂತೂ ಚರ್ಚೆಯಾಗುತ್ತಿದೆ. ಈಗಾಗಲೇ ಅನಂತ್ನಾಗ್ ಅವರಿಗೆ 74 ವರ್ಷ. ಹೀಗಾಗಿ ಚುನಾವಣೆ ಸ್ಪರ್ಧೆ ಮಾಡುತ್ತಾರಾ? ಇಲ್ಲ ಪಕ್ಷ ವಹಿಸಿದ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಾರಾ? ಅನ್ನೋ ಲೆಕ್ಕಾಚಾರ ಹಾಕಲಾಗುತ್ತಿದೆ. ಅನಂತ್ನಾಗ್ ಮುಂದಿನ ನಡೆಯೇನು? ಅನ್ನೋದು ಇಂದು ಸಂಜೆ ಗೊತ್ತಾಗಲಿದೆ.
ರಾಜಕೀಯ ಹೊಸದಲ್ಲ ;
ಅನಂತ್ನಾಗ್ ತಮ್ಮ ವೃತ್ತಿ ಬದುಕಿನ ಉತ್ತುಂಗದಲ್ಲಿರುವಾಗಲೇ ರಾಜಕೀಯಕ್ಕೆ ಧುಮುಕಿದ್ದರು. 1983ರ ವಿಧಾನಸಭೆ ಚುನಾವಣೆಯಲ್ಲಿ ಅನಂತ್ ನಾಗ್ ಜನತಾ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದರು. 1994ರಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶ ಮಾಡಿದ್ದರು. ಅಲ್ಲದೆ ಜೆ ಹೆಚ್ ಪಟೇಲ್ ಅವರ ಸಚಿವ ಸಂಪುಟದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು.
ಚಾಮರಾಜಪೇಟೆ ಕ್ಷೇತ್ರದಿಂದ ಸೋಲು ;
ಅನಂತ್ನಾಗ್ 2004ರ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಆದರೆ, ಈ ಬಾರಿ ಅನಂತ್ನಾಗ್ ಅವರು ಸೋಲುಂಡಿದ್ದರು. ಆ ಬಳಿಕ ನಿಧಾನವಾಗಿ ರಾಜಕೀಯದಿಂದ ದೂರು ಉಳಿದು, ಮತ್ತೆ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದರು. ಈಗ ಮತ್ತೆ ಬಿಜೆಪಿ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ಆದರೆ, ಮುಂದಿ ಹಾದಿ ಹೇಗಿರುತ್ತೆ ಅನ್ನೋದು ಕುತೂಹಲ.
Veteran Kannada actor and film producer Anant Nag will officially join Bharatiya Janata Party (BJP) on February 22 (Wednesday) in the presence of the party's Karnataka unit President Nalin Kumar Kateel.Nag, 74, has always been vocal about the policies of the Narendra Modi government. He has also raised voice for the Kashmiri Pandit community from South.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm