ಬ್ರೇಕಿಂಗ್ ನ್ಯೂಸ್
22-02-23 05:13 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ.ರೂಪಾ ಮೌದ್ಗಿಲ್ನಡುವಿನ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ಹೋಗಿದೆ. ಇಬ್ಬರೂ ಅಧಿಕಾರಿಗಳು ಪರಸ್ಪರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ರೋಹಿಣಿ ಸಿಂಧೂರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರೂಪಾ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ರೂಪಾ ಮೌದ್ಗಿಲ್ ಮಾನಹಾನಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನಿಡಲು ಮನವಿ ಮಾಡಿದ್ದಾರೆ. ಆದ್ರೆ, ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಕೋರ್ಟ್ ಆದೇಶವನ್ನು ನಾಳೆ ಫೆ 22ಕ್ಕೆ ಕಾಯ್ದಿರಿಸಿದೆ.
ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡಲು ಸಿಂಧೂರಿ ಮನವಿ ಮಾಡಿದ್ದು, ಇದನ್ನು ಮಧ್ಯಂತರ ಆದೇಶವನ್ನು 74ನೇ ಸಿಟಿ ಸಿವಿಲ್ ಕೋರ್ಟ್ ಕಾಯ್ದಿರಿಸಿದ್ದು, ನಿರ್ಬಂಧಕಾಜ್ಞೆ ನೀಡಬೇಕೇ ಬೇಡವೇ ಎಂದು ನಾಳೆ ತೀರ್ಪು ಪ್ರಕಟಿಸಲಿದೆ.ಇದರಿಂದ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ರೂಪಾ ಮೌದ್ಗಿಲ್ ಸೈಬರ್ ಅಪರಾಧ ವಿಭಾಗದ ಮುಖ್ಯಸ್ಥರಾಗಿದ್ದರು. ಐಪಿಎಸ್ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆಯಿದೆ. ಮೊಬೈಲ್ನಲ್ಲಿನ ಮಾಹಿತಿ ಕಾನೂನುಬಾಹಿರವಾಗಿ ಪಡೆದುಕೊಂಡಿದ್ದಾರೆ. ಡಿ.ರೂಪಾ ಕ್ರಮ ಸಂಪೂರ್ಣ ಕಾನೂನುಬಾಹಿರ ಎಂದು ರೋಹಿಣಿ ಪರ ವಕೀಲರು ವಾದ ಮಂಡಿಸಿದರು.
ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ರೂಪಾ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೇ ಅವರ ಖಾಸಗಿ ಮೊಬೈಲ್ ನಂಬರ್ ಅನ್ನೂ ಬಹಿರಂಗಪಡಿಸಿದ್ದಾರೆ. ಇದರಿಂದಾಗಿ ನೂರಾರು ಅಪರಿಚಿತರು ಕರೆ ಮಾಡುತ್ತಿದ್ದಾರೆ. ರೂಪಾ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ಫೇಸ್ ಬುಕ್ ನಲ್ಲಿ ಮಾನಹಾನಿಕರ ಹೇಳಿಕೆ ನೀಡುತ್ತಿದ್ದಾರೆ. ಕಾನೂನಿನ ಚೌಕಟ್ಟನ್ನು ಮೀರಿ ರೂಪಾ ಹೇಳಿಕೆ ನೀಡುತ್ತಿದ್ದಾರೆ ಎಂದು ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ ಪರ ವಾದಮಂಡನೆ ಮಾಡಿದ್ದಾರೆ.
Rohini Sindhuri moves to court against IPS officer Roopa for using her private photos on social media Requests for injection order against roopa for misuse of personal photos even amid orders of chief secretary.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm