ಬ್ರೇಕಿಂಗ್ ನ್ಯೂಸ್
22-02-23 05:28 pm HK News Desk ಕರ್ನಾಟಕ
ಕಾರವಾರ, ಫೆ.22: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸದ ವೇಳೆ ಭಟ್ಕಳದ ಶಿರಾಲಿಯಲ್ಲಿ ಶಾಸಕ ಸುನೀಲ್ ನಾಯ್ಕ ಮನೆಯಲ್ಲಿ ಮೀನೂಟ ಸವಿದು ದೇವರ ದರ್ಶನ ಮಾಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದೆ.
ಫೆ.19ರ ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಸಿ.ಟಿ ರವಿ ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ನಂತರ ಭಟ್ಕಳಕ್ಕೆ ಆಗಮಿಸಿದ್ದರು. ಈ ವೇಳೆ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಮೀನೂಟ ಸೇವಿಸಿದ್ದ ಸಿ.ಟಿ ರವಿ ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭಟ್ಕಳ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಭೇಟಿ ನೀಡಿದ್ದಾರೆ.
ಈ ವೇಳೆ ದೇವಸ್ಥಾನದ ಬಾಗಿಲಲ್ಲೇ ಶಾಸಕ ಸುನಿಲ್ ನಾಯ್ಕ್ ಹಾಗೂ ಕಮಿಟಿ ಸದಸ್ಯರಿಂದ ಸನ್ಮಾನ ಸಹ ಮಾಡಿದ್ದು, ಶಾಸಕರ ಜೊತೆ ಮೀನೂಟ ಸವಿಯುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಿದ್ದರಾಮಯ್ಯ ಮಾಂಸ ತಿಂದು ಧರ್ಮಸ್ಥಳ ದೇವಸ್ಥಾನಕ್ಕೆ ಹೋದರು ಎಂದು ವಿವಾದ ಮಾಡಿದ ಬಿಜೆಪಿಗರು ಈಗೆಲ್ಲಿ ಹೋದರು ಎಂದು ಕಾಂಗ್ರಸಿಗರು ಪ್ರಶ್ನೆ ಮಾಡಿದ್ದು ಜಿಲ್ಲೆಯ ಸಾತ್ವಿಕ ಜನರು ಸಹ ಸಿಟಿ ರವಿ ವರ್ತನೆಗೆ ಕಿಡಿಕಾರಿದ್ದಾರೆ.
ನಾನು ಹುಟ್ಟಿರೋದೆ ಮಾಂಸ ತಿನ್ನುವ ಜಾತಿಯಲ್ಲಿ ;
ನಾನು ಹುಟ್ಟಿರೋದೆ ಮಾಂಸ ತಿನ್ನುವ ಜಾತಿಯಲ್ಲಿ, ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.
ವೈರಲ್ ಆಗಿದ್ದ ಫೋಟೋ ಕುರಿತು ಮಂಡ್ಯದಲ್ಲಿ ಸ್ಪಷ್ಟನೆ ನೀಡಿದ ಅವರು, ಭಟ್ಕಳಕ್ಕೆ ಹೋದಾಗ ನಾಗಬನ ನೋಡಲು ಕರೆದಿದ್ದರು. ಹೊಸದಾಗಿ ದೇವಾಲಯ ಕಟ್ಟಲಾಗಿತ್ತು. 45 ದಿನಗಳು ಓಪನ್ ಇರಲಿಲ್ಲ. ನಾಗಬನದ ಹೊರಾವರಣದಲ್ಲಿ ನಿಂತು ದರ್ಶನ ಪಡೆದಿದ್ದೇವೆ ಎಂದು ಹೇಳಿದರು.
ನನಗೆ ದೇವರ ಬಗ್ಗೆ ಶ್ರದ್ಧೆ ಇದೆ, ದೇವಾಲಯಕ್ಕೆ ನಾನ್ ವೆಜ್ ತಿಂದು ಹೋಗಿಲ್ಲ. ನಾನು ಹುಟ್ಟಿರೋದೆ ಮಾಂಸ ತಿನ್ನೋ ಜಾತಿಯಲ್ಲಿ. ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಮಾಡುತ್ತಿದ್ದಾರೆ. ವ್ರತ ಪೂಜೆಗಳನ್ನು ಆಚರಿಸುವವನು ನಾನು, ನನಗೆ ದೇವರ ಬಗ್ಗೆ ಶ್ರದ್ಧೆ ಇದೆ. ಮಾಂಸ ತಿನ್ನುತ್ತೇನೆ ಹಾಗಂತ ತಿಂದು ದಾಸ್ಟ್ಯ ತೋರಿಸಲ್ಲ. ಮಾಂಸ ತಿಂದು ದೇವಾಲಯಕ್ಕೆ ಹೋಗ್ತೀನಿ ಏನಿವಾಗ, ಯಾರು ಏನ್ ಮಾಡ್ತಾರೆ ಅಂತ ಸಿದ್ದು ರೀತಿ ಹೇಳಲ್ಲ ಎಂದರು.
Ct Ravi visits temple after eating non veg in Bhatkal, sparks controversy.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 04:34 pm
HK News Staffer
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am