ಬ್ರೇಕಿಂಗ್ ನ್ಯೂಸ್
30-07-20 03:03 pm Bangalore Correspondent ಕರ್ನಾಟಕ
ಬೆಂಗಳೂರು: ಕಳೆದ 7 ದಿನಗಳಿಂದ 5 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೊರೊನಾ ಸೋಂಕು ಇಂದು 6 ಸಾವಿರಕ್ಕೆ ಏರಿದೆ. ರಾಜ್ಯದಲ್ಲಿ ಇಂದು 6,128 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 118632ಕ್ಕೆ ಏರಿಕೆಯಾಗಿದೆ.
ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅನ್ವಯ, ಇಂದು 83 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 2,230 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 3, 793 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 118632 ಸೋಂಕಿತರ ಪೈಕಿ 69, 700 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 46,694 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 620 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 20488 ರ್ಯಾಪಿಡ್ ಟೆಸ್ಟ್ ನಲ್ಲಿ 17, 607 ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು 38,095 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 1,25,091 ಮಂದಿಗೆ ರ್ಯಾಪಿಡ್ ಟೆಸ್ಟ್, 11,88,765 ಮಂದಿಗೆ ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 13,13,856 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು 2,233 ಮಂದಿಗೆ ಸೋಂಕು ದೃಢವಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 53,324ಕ್ಕೆ ಏರಿಕೆ ಆಗಿದೆ. ಬೆಂಗಳೂರು ನಗರ 2,233, ಮೈಸೂರು 430, ಬಳ್ಳಾರಿ 343, ಉಡುಪಿ 248, ಬೆಂಗಳೂರು ಗ್ರಾಮಾಂತರ 224, ಕಲಬುರಗಿ 220, ಬೆಳಗಾವಿ 202 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಒಟ್ಟು 7 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಬೆಂಗಳೂರು ನಗರ 1,912, ಬಳ್ಳಾರಿ 337, ರಾಯಚೂರು 191, ಚಿಕ್ಕಬಳ್ಳಾಪುರ 176, ಧಾರವಾಡ 152, ಕಲಬುರಗಿ 124, ದಕ್ಷಿಣ ಕನ್ನಡ 105, ಕೋಲಾರ 90, ದಾವಣಗೆರೆ 85, ಮೈಸೂರು 70, ಉಡುಪಿ 61, ತುಮಕೂರು 60, ಬಾಗಲಕೋಟೆ 55, ಮಂಡ್ಯ 50, ಉತ್ತರ ಕನ್ನಡ 50, ಬೆಳಗಾವಿ 50, ಬೀದರ್ 44, ಚಿಕ್ಕಮಗಳೂರು 30, ವಿಜಯಪುರ 30, ಚಾಮರಾಜನಗರ 30, ಯಾದಗಿರಿ 23, ಹಾಸನ 21, ಗದಗ 19, ಹಾವೇರಿ 18 ಹಾಗೂ ಕೊಪ್ಪಳ 10 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm