ಬ್ರೇಕಿಂಗ್ ನ್ಯೂಸ್
25-02-23 01:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಡಿಕೊಂಡ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ರೋಹಿಣಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಫೇಸ್ಬುಕ್ ಮೂಲಕ 20 ಅಂಶಗಳನ್ನು ಉಲ್ಲೇಖಿಸಿ ಆರೋಪ ಮಾಡಿದ್ದಲ್ಲದೆ, ಕೆಲವು ಖಾಸಗಿ ಫೋಟೋಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹಿರಿಯ ಐಎಎಸ್ ಅಧಿಕಾರಿಗಳಿಗೆ ತನ್ನ ಖಾಸಗಿ ಫೋಟೋಗಳನ್ನು ಕಳಿಸಿಕೊಟ್ಟು ಬ್ಲಾಕ್ಮೇಲ್ ಮಾಡುತ್ತಾರೆಂದು ಆರೋಪ ಮಾಡಿದ್ದರು. ಈ ವಿಚಾರ ಮಾಧ್ಯಮದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.

ಈ ಬಗ್ಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಫೆಬ್ರವರಿ 20ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ದೂರು ನೀಡಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಕೂಡ ರೋಹಿಣಿ ವಿರುದ್ಧ ಪ್ರತಿ ದೂರು ನೀಡಿದ್ದರು. ವಿಧಾನಸೌಧದಲ್ಲಿರುವ ಸಿಎಸ್ ಕಚೇರಿಯಲ್ಲಿ ವಂದಿತಾ ಶರ್ಮಾರನ್ನು ಭೇಟಿಯಾಗಿದ್ದ ಡಿ.ರೂಪಾ, ಸುಮಾರು 35 ನಿಮಿಷ ಸಿಎಸ್ ಜೊತೆ ಚರ್ಚಿಸಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ದೂರು ಕೊಟ್ಟಿದ್ದರು. ಇಬ್ಬರಿಗೂ ಮುಖ್ಯ ಕಾರ್ಯದರ್ಶಿ ಜಾಲತಾಣದಲ್ಲಿ ಯಾವುದೇ ಅಭಿಪ್ರಾಯ ಹಂಚಿಕೊಳ್ಳದಂತೆ ಸೂಚನೆ ನೀಡಿದ್ದರೂ, ರೂಪಾ ಮೌದ್ಗಿಲ್ ಆನಂತರವೂ ಪೋಸ್ಟ್ ಹಾಕಿದ್ದರು.
ಇಬ್ಬರು ಅಧಿಕಾರಿಗಳ ಜಡೆ ಜಗಳ ಸುದ್ದಿಯ ಕೇಂದ್ರ ಬಿಂದುವಾಗಿದ್ದಲ್ಲದೆ, ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟುಮಾಡಿತ್ತು. ವಿಪಕ್ಷ ನಾಯಕರು ರಾಜ್ಯದ ಆಡಳಿತ ಸ್ಥಿತಿಯ ಬಗ್ಗೆ ಟೀಕೆಯನ್ನೂ ಮಾಡಿದ್ದರು. ಇದರಂತೆ, ಮುಖ್ಯಮಂತ್ರಿ ಇಬ್ಬರ ಬಗ್ಗೆಯೂ ತನಿಖೆಗೆ ಆದೇಶ ಮಾಡಿ ಜಡೆಜಗಳಕ್ಕೆ ತಾತ್ಕಾಲಿಕ ಅಂತ್ಯ ಹಾಡಿದ್ದಾರೆ.
The Karnataka government has ordered a departmental inquiry against IAS officer Rohini Sindhuri and IPS officer D. Roopa Moudgil over their public spat, sources said on Saturday.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm