ಬ್ರೇಕಿಂಗ್ ನ್ಯೂಸ್
25-02-23 01:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಡಿಕೊಂಡ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ರೋಹಿಣಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಫೇಸ್ಬುಕ್ ಮೂಲಕ 20 ಅಂಶಗಳನ್ನು ಉಲ್ಲೇಖಿಸಿ ಆರೋಪ ಮಾಡಿದ್ದಲ್ಲದೆ, ಕೆಲವು ಖಾಸಗಿ ಫೋಟೋಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹಿರಿಯ ಐಎಎಸ್ ಅಧಿಕಾರಿಗಳಿಗೆ ತನ್ನ ಖಾಸಗಿ ಫೋಟೋಗಳನ್ನು ಕಳಿಸಿಕೊಟ್ಟು ಬ್ಲಾಕ್ಮೇಲ್ ಮಾಡುತ್ತಾರೆಂದು ಆರೋಪ ಮಾಡಿದ್ದರು. ಈ ವಿಚಾರ ಮಾಧ್ಯಮದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.

ಈ ಬಗ್ಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಫೆಬ್ರವರಿ 20ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ದೂರು ನೀಡಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಕೂಡ ರೋಹಿಣಿ ವಿರುದ್ಧ ಪ್ರತಿ ದೂರು ನೀಡಿದ್ದರು. ವಿಧಾನಸೌಧದಲ್ಲಿರುವ ಸಿಎಸ್ ಕಚೇರಿಯಲ್ಲಿ ವಂದಿತಾ ಶರ್ಮಾರನ್ನು ಭೇಟಿಯಾಗಿದ್ದ ಡಿ.ರೂಪಾ, ಸುಮಾರು 35 ನಿಮಿಷ ಸಿಎಸ್ ಜೊತೆ ಚರ್ಚಿಸಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ದೂರು ಕೊಟ್ಟಿದ್ದರು. ಇಬ್ಬರಿಗೂ ಮುಖ್ಯ ಕಾರ್ಯದರ್ಶಿ ಜಾಲತಾಣದಲ್ಲಿ ಯಾವುದೇ ಅಭಿಪ್ರಾಯ ಹಂಚಿಕೊಳ್ಳದಂತೆ ಸೂಚನೆ ನೀಡಿದ್ದರೂ, ರೂಪಾ ಮೌದ್ಗಿಲ್ ಆನಂತರವೂ ಪೋಸ್ಟ್ ಹಾಕಿದ್ದರು.
ಇಬ್ಬರು ಅಧಿಕಾರಿಗಳ ಜಡೆ ಜಗಳ ಸುದ್ದಿಯ ಕೇಂದ್ರ ಬಿಂದುವಾಗಿದ್ದಲ್ಲದೆ, ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟುಮಾಡಿತ್ತು. ವಿಪಕ್ಷ ನಾಯಕರು ರಾಜ್ಯದ ಆಡಳಿತ ಸ್ಥಿತಿಯ ಬಗ್ಗೆ ಟೀಕೆಯನ್ನೂ ಮಾಡಿದ್ದರು. ಇದರಂತೆ, ಮುಖ್ಯಮಂತ್ರಿ ಇಬ್ಬರ ಬಗ್ಗೆಯೂ ತನಿಖೆಗೆ ಆದೇಶ ಮಾಡಿ ಜಡೆಜಗಳಕ್ಕೆ ತಾತ್ಕಾಲಿಕ ಅಂತ್ಯ ಹಾಡಿದ್ದಾರೆ.
The Karnataka government has ordered a departmental inquiry against IAS officer Rohini Sindhuri and IPS officer D. Roopa Moudgil over their public spat, sources said on Saturday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm