ಬ್ರೇಕಿಂಗ್ ನ್ಯೂಸ್
25-02-23 01:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಡಿಕೊಂಡ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ರೋಹಿಣಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಫೇಸ್ಬುಕ್ ಮೂಲಕ 20 ಅಂಶಗಳನ್ನು ಉಲ್ಲೇಖಿಸಿ ಆರೋಪ ಮಾಡಿದ್ದಲ್ಲದೆ, ಕೆಲವು ಖಾಸಗಿ ಫೋಟೋಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹಿರಿಯ ಐಎಎಸ್ ಅಧಿಕಾರಿಗಳಿಗೆ ತನ್ನ ಖಾಸಗಿ ಫೋಟೋಗಳನ್ನು ಕಳಿಸಿಕೊಟ್ಟು ಬ್ಲಾಕ್ಮೇಲ್ ಮಾಡುತ್ತಾರೆಂದು ಆರೋಪ ಮಾಡಿದ್ದರು. ಈ ವಿಚಾರ ಮಾಧ್ಯಮದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.

ಈ ಬಗ್ಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಫೆಬ್ರವರಿ 20ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ದೂರು ನೀಡಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಕೂಡ ರೋಹಿಣಿ ವಿರುದ್ಧ ಪ್ರತಿ ದೂರು ನೀಡಿದ್ದರು. ವಿಧಾನಸೌಧದಲ್ಲಿರುವ ಸಿಎಸ್ ಕಚೇರಿಯಲ್ಲಿ ವಂದಿತಾ ಶರ್ಮಾರನ್ನು ಭೇಟಿಯಾಗಿದ್ದ ಡಿ.ರೂಪಾ, ಸುಮಾರು 35 ನಿಮಿಷ ಸಿಎಸ್ ಜೊತೆ ಚರ್ಚಿಸಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ದೂರು ಕೊಟ್ಟಿದ್ದರು. ಇಬ್ಬರಿಗೂ ಮುಖ್ಯ ಕಾರ್ಯದರ್ಶಿ ಜಾಲತಾಣದಲ್ಲಿ ಯಾವುದೇ ಅಭಿಪ್ರಾಯ ಹಂಚಿಕೊಳ್ಳದಂತೆ ಸೂಚನೆ ನೀಡಿದ್ದರೂ, ರೂಪಾ ಮೌದ್ಗಿಲ್ ಆನಂತರವೂ ಪೋಸ್ಟ್ ಹಾಕಿದ್ದರು.
ಇಬ್ಬರು ಅಧಿಕಾರಿಗಳ ಜಡೆ ಜಗಳ ಸುದ್ದಿಯ ಕೇಂದ್ರ ಬಿಂದುವಾಗಿದ್ದಲ್ಲದೆ, ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟುಮಾಡಿತ್ತು. ವಿಪಕ್ಷ ನಾಯಕರು ರಾಜ್ಯದ ಆಡಳಿತ ಸ್ಥಿತಿಯ ಬಗ್ಗೆ ಟೀಕೆಯನ್ನೂ ಮಾಡಿದ್ದರು. ಇದರಂತೆ, ಮುಖ್ಯಮಂತ್ರಿ ಇಬ್ಬರ ಬಗ್ಗೆಯೂ ತನಿಖೆಗೆ ಆದೇಶ ಮಾಡಿ ಜಡೆಜಗಳಕ್ಕೆ ತಾತ್ಕಾಲಿಕ ಅಂತ್ಯ ಹಾಡಿದ್ದಾರೆ.
The Karnataka government has ordered a departmental inquiry against IAS officer Rohini Sindhuri and IPS officer D. Roopa Moudgil over their public spat, sources said on Saturday.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm