ಬ್ರೇಕಿಂಗ್ ನ್ಯೂಸ್
25-02-23 01:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಡಿಕೊಂಡ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ರೋಹಿಣಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಫೇಸ್ಬುಕ್ ಮೂಲಕ 20 ಅಂಶಗಳನ್ನು ಉಲ್ಲೇಖಿಸಿ ಆರೋಪ ಮಾಡಿದ್ದಲ್ಲದೆ, ಕೆಲವು ಖಾಸಗಿ ಫೋಟೋಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹಿರಿಯ ಐಎಎಸ್ ಅಧಿಕಾರಿಗಳಿಗೆ ತನ್ನ ಖಾಸಗಿ ಫೋಟೋಗಳನ್ನು ಕಳಿಸಿಕೊಟ್ಟು ಬ್ಲಾಕ್ಮೇಲ್ ಮಾಡುತ್ತಾರೆಂದು ಆರೋಪ ಮಾಡಿದ್ದರು. ಈ ವಿಚಾರ ಮಾಧ್ಯಮದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.

ಈ ಬಗ್ಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಫೆಬ್ರವರಿ 20ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ದೂರು ನೀಡಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಕೂಡ ರೋಹಿಣಿ ವಿರುದ್ಧ ಪ್ರತಿ ದೂರು ನೀಡಿದ್ದರು. ವಿಧಾನಸೌಧದಲ್ಲಿರುವ ಸಿಎಸ್ ಕಚೇರಿಯಲ್ಲಿ ವಂದಿತಾ ಶರ್ಮಾರನ್ನು ಭೇಟಿಯಾಗಿದ್ದ ಡಿ.ರೂಪಾ, ಸುಮಾರು 35 ನಿಮಿಷ ಸಿಎಸ್ ಜೊತೆ ಚರ್ಚಿಸಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ದೂರು ಕೊಟ್ಟಿದ್ದರು. ಇಬ್ಬರಿಗೂ ಮುಖ್ಯ ಕಾರ್ಯದರ್ಶಿ ಜಾಲತಾಣದಲ್ಲಿ ಯಾವುದೇ ಅಭಿಪ್ರಾಯ ಹಂಚಿಕೊಳ್ಳದಂತೆ ಸೂಚನೆ ನೀಡಿದ್ದರೂ, ರೂಪಾ ಮೌದ್ಗಿಲ್ ಆನಂತರವೂ ಪೋಸ್ಟ್ ಹಾಕಿದ್ದರು.
ಇಬ್ಬರು ಅಧಿಕಾರಿಗಳ ಜಡೆ ಜಗಳ ಸುದ್ದಿಯ ಕೇಂದ್ರ ಬಿಂದುವಾಗಿದ್ದಲ್ಲದೆ, ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟುಮಾಡಿತ್ತು. ವಿಪಕ್ಷ ನಾಯಕರು ರಾಜ್ಯದ ಆಡಳಿತ ಸ್ಥಿತಿಯ ಬಗ್ಗೆ ಟೀಕೆಯನ್ನೂ ಮಾಡಿದ್ದರು. ಇದರಂತೆ, ಮುಖ್ಯಮಂತ್ರಿ ಇಬ್ಬರ ಬಗ್ಗೆಯೂ ತನಿಖೆಗೆ ಆದೇಶ ಮಾಡಿ ಜಡೆಜಗಳಕ್ಕೆ ತಾತ್ಕಾಲಿಕ ಅಂತ್ಯ ಹಾಡಿದ್ದಾರೆ.
The Karnataka government has ordered a departmental inquiry against IAS officer Rohini Sindhuri and IPS officer D. Roopa Moudgil over their public spat, sources said on Saturday.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm