ಬ್ರೇಕಿಂಗ್ ನ್ಯೂಸ್
25-02-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25 : ವಿಚ್ಚೇದನ ಪ್ರಕರಣದಲ್ಲಿ ಪತಿ ನಿರುದ್ಯೋಗಿಯಾಗಿದ್ದರೂ ಉದ್ಯೋಗ ಹುಡುಕಿ ಸಂಪಾದನೆ ಮಾಡಬೇಕು ಮತ್ತು ತನ್ನ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಲೇಬೇಕು ಎಂದು ಬೆಂಗಳೂರಿನ ಹೈಕೋರ್ಟ್ ತೀರ್ಪು ನೀಡಿದೆ.
ಮೇಲ್ಮನವಿ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಪ್ರಕಟಿಸಿದ್ದು, ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ. ಆದ್ದರಿಂದ ಆತ ನಿರುದ್ಯೋಗಿಯಾಗಿದ್ದರೆ, ಕೆಲಸವನ್ನು ಹುಡುಕಬೇಕು ಮತ್ತು ಸಂಪಾದಿಸಬೇಕು ಎಂದು ಹೇಳಿದೆ.
ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ ತೀರ್ಪನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಮೇಲಿನಂತೆ ತೀರ್ಪು ನೀಡಿದೆ.
ಅರ್ಜಿದಾರರು ತಾನು ಅನಾರೋಗ್ಯದಿಂದ ಬಳಲುತ್ತಿದ್ದು, ಸೂಕ್ತ ಕೆಲಸವಿಲ್ಲ. ಹೀಗಾಗಿ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ ಎಂದು ವಾದಿಸಿದ್ದರು. ಆದ್ರೆ, ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್, ಪತಿ ತನ್ನ ಪತ್ನಿಗೆ ಮಾಸಿಕ 10,000 ರೂ. ಪರಿಹಾರ ಪಾವತಿಸುವ ಸ್ಥಿತಿಯಲ್ಲಿಲ್ಲ ಎಂಬುದು ಸ್ವೀಕಾರಾರ್ಹವಲ್ಲ. ಆತ ಕೆಲಸ ಮಾಡಲು ಸಮರ್ಥನಿದ್ದು, ಕೆಲಸವನ್ನ ಹುಡುಕಿಕೊಂಡು ಪರಿಹಾರ ನೀಡಬೇಕು ಎಂದು ನ್ಯಾಯಪೀಠ ಪುನರುಚ್ಚರಿಸಿದೆ. ಅದರಂತೆ, ಪತ್ನಿಗೆ 6,000 ರೂ. ಮತ್ತು ಮಗುವಿಗೆ 4,000 ರೂ. ಜೀವನಾಂಶ ನೀಡುವಂತೆ ತೀರ್ಪು ನೀಡಿದೆ.
Karnataka Court orders to pay for maintenance money to wife even if he is unemployed.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm