ಬ್ರೇಕಿಂಗ್ ನ್ಯೂಸ್
27-02-23 04:30 pm HK News Desk ಕರ್ನಾಟಕ
ಶಿವಮೊಗ್ಗ, ಫೆ.27: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಹುದಿನಗಳ ಕನಸು ಕೊನೆಗೂ ನನಸಾಗಿದೆ. ಯಡಿಯೂರಪ್ಪ ಜನ್ಮ ದಿನದಂದೇ ಕರ್ನಾಟಕದ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಅರ್ಪಿಸಿದ್ದಾರೆ.
ಸೋಗಾನೆಯಲ್ಲಿ ಮಲೆನಾಡಿಗೊಂದು ವಿಮಾನ ನಿಲ್ದಾಣ ಮಾಡಬೇಕೆಂಬುದು ಯಡಿಯೂರಪ್ಪ ಕನಸಾಗಿತ್ತು. 2008 ಜೂನ್ 20ರಂದು ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರೇ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಹತ್ತು ವರ್ಷಗಳ ಬಳಿಕ 2018ರ ವೇಳೆಗೆ ನಿಲ್ದಾಣದ ಕಾಮಗಾರಿಗೆ ವೇಗ ಸಿಕ್ಕಿತ್ತು. ಇದೀಗ ಅವರ ಜನ್ಮದಿನದಂದೇ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟಿಸುವ ಮೂಲಕ ಅಪರೂಪದ ಗಿಫ್ಟ್ ಕೊಟ್ಟಿದ್ದಾರೆ.
ಮಲೆನಾಡಿನ ಹಸಿರಿನ ಮಡಿಲಿನ ಮಧ್ಯೆ ಬರೋಬ್ಬರಿ 775 ಎಕರೆ ಪ್ರದೇಶದಲ್ಲಿ ನಿಲ್ದಾಣ ಆವರಿಸಿಕೊಂಡಿದ್ದು 3.2 ಕಿಮೀ ಉದ್ದಕ್ಕೆ ರನ್ ವೇ ಮಾಡಲಾಗಿದೆ. 450 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆದಿದ್ದು, ರಾಜ್ಯದ ಬೆಂಗಳೂರು ಬಿಟ್ಟರೆ ಅತಿದೊಡ್ಡ ವಿಮಾನ ನಿಲ್ದಾಣ ಎನ್ನುವ ಹೆಗ್ಗಳಿಗೆ ಪಾತ್ರವಾಗಿದೆ. ಇದೇ ವೇಳೆ ಮಾತನಾಡಿದ ಯಡಿಯೂರಪ್ಪ, ಈ ದಿನ ಬಹಳ ಅಪರೂಪದ ಮತ್ತು ವೈಶಿಷ್ಟ್ಯಪೂರ್ಣವಾದದ್ದು. ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ದಿನ. ಇಡೀ ವಿಶ್ವವೇ ಕೊಂಡಾಡುತ್ತಿರುವ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸಿದ್ದು ನಮ್ಮೆಲ್ಲರ ಭಾಗ್ಯ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ ಎಂದು ಹೇಳಿದರು.
ಆಬಳಿಕ, ಕನ್ನಡದಲ್ಲೇ ಭಾಷಣ ಆರಂಭಿಸಿದ ನರೇಂದ್ರ ಮೋದಿ, ಸಿರಿಗನ್ನಂಡಂ ಗೆಲ್ಗೆ ಸಿರಿ ಕನ್ನಡಂ ಬಾಳ್ಗೆ, ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂದು ಹೇಳುವ ಮೂಲಕ ರಾಷ್ಟ್ರ ಕವಿ ಕುವೆಂಪು ಅವರನ್ನು ನೆನಪಿಸಿಕೊಂಡರು. ಹಿಂದೆಲ್ಲ ದೊಡ್ಡ ನಗರಗಳಲ್ಲಿ ಮಾತ್ರ ವಿಮಾನ ನಿಲ್ದಾಣ ಇತ್ತು. ಇವತ್ತು ಹಳ್ಳಿಗೂ ವಿಮಾನಗಳು ಕಾಲಿಡುತ್ತಿದ್ದು ಇದು ಅಭಿವೃದ್ಧಿಯ ಸಂಕೇತ. ಭಾರತದತ್ತ ಇಡೀ ಜಗತ್ತು ತಿರುಗಿ ನೋಡುತ್ತಿದೆ. ಗ್ರಾಮೀಣ ಹಾಗೂ ಸಣ್ಣ ನಗರಗಳು ಅಭಿವೃದ್ದಿಗೊಳ್ಳುತ್ತಿವೆ. ದೇಶದಲ್ಲಿ 74 ಏರ್ಪೋರ್ಟ್ಗಳನ್ನು ಹೊಸತಾಗಿ ನಿರ್ಮಾಣ ಮಾಡುತ್ತಿದ್ದೇವೆ ಎಂದು ಹೇಳಿದರು.
ಬಿಎಸ್ ಯಡಿಯೂರಪ್ಪ ಅವರ ಜನ್ಮದಿನದ ಶುಭಾಶಯ ಸಲ್ಲಿಸಿದ ಪ್ರಧಾನಿ ಮೋದಿ, ಅವರ ಜೀವನ ಬಡವರ ಹಾಗೂ ರೈತರ ಕಲ್ಯಾಣಕ್ಕೆ ಸಮರ್ಪಣೆ ಮಾಡಿದ್ದಾರೆ ಎಂದರಲ್ಲದೆ, ನೆರೆದ ಜನರಿಗೆ ಮೊಬೈಲ್ ಫೋನ್ ಫ್ಲಾಶ್ ಓಪನ್ ಮಾಡಿ ಬಿಎಸ್ವೈಗೆ ಶುಭಕೋರುವಂತೆ ಎಂದು ಮನವಿ ಮಾಡಿದರು. ಅದರಂತೆ ನೆರೆದಿದ್ದ ಜನರು ಮೊಬೈಲ್ ಫೋನ್ ಫ್ಲಾಶ್ ಹಾಕಿ ಶುಭಕೋರಿದರು.
PM Narendra Modi has inaugurated the Shivmogga Airport in Karnataka and it will cater to the people of central Karnataka with improved air connectivity. Built at a cost of Rs 450 crore, the airport’s operation will help in the region's growth in various sectors, like tourism, IT industry establishment and more.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm