ಬ್ರೇಕಿಂಗ್ ನ್ಯೂಸ್
28-02-23 12:32 pm HK News Desk ಕರ್ನಾಟಕ
ಶಿರಸಿ, ಫೆ 28: ತಾಲ್ಲೂಕಿನ ಬನವಾಸಿಗೆ ಮಂಗಳವಾರ ಕದಂಬೋತ್ಸವ ಉದ್ಘಾಟನೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಣಕಿಸುವಂತೆ ಪಟ್ಟಣದ ಹಲವೆಡೆ ಪೇ ಸಿ.ಎಂ. ಪೋಸ್ಟರ್ ಸೋಮವಾರ ರಾತ್ರಿ ಅಂಟಿಸಲಾಗಿದೆ.
ರಾಜ್ಯದ ಹಲವೆಡೆ ನಡೆಯುತ್ತಿದ್ದ ಪೇ ಸಿಎಂ ಪೋಸ್ಟರ್ ಅಭಿಯಾನ ಈಗ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕ್ಷೇತ್ರಕ್ಕೂ ಕಾಲಿಟ್ಟಿದೆ.
ಸಿ.ಎಂ ಬರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪೋಸ್ಟರ್ ಅನ್ನು ಹಾಕಿ ಆಹಾರದ 'ಕಿಟ್ ಸ್ಕ್ಯಾಮ್ಗೆ ಪೇ ಸಿಎಂ ಮಾಡಿ' ಹಾಗೂ 'ಡೀಲ್ ನಿಮ್ದು, ಕಮಿಷನ್ ನಮ್ದು' ಎಂದು ಬರೆದು ಬನವಾಸಿಯ ರಸ್ತೆಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆದಿದೆ.
ಕಂದಬೋತ್ಸವ ಹಾಗೂ ವಿವಿಧ ಕಾರ್ಯಕ್ರಮಕ್ಕಾಗಿ ಮಂಗಳವಾರ ಸಂಜೆ ಶಿರಸಿ ಮತ್ತು ಸಿದ್ದಾಪುರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆಸಲಾಗಿದೆ. ಪೇ ಸಿಎಂ ಜತೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿರುದ್ಧ ಪೋಸ್ಟರ್ ಗಳನ್ನ ಅಂಟಿಸಲಾಗಿದೆ.
ಸಿಎಂ ಸಂಚರಿಸುವ ಮಾರ್ಗದಲ್ಲಿ ಪೋಸ್ಟರ್ ;
ಸಿಎಂ ಸಂಚರಿಸುವ ಬನವಾಸಿಯ ರಸ್ತೆಯುದ್ದಕ್ಕೂ ಪೇ ಸಿಎಂ ಪೋಸ್ಟರ್ ಗಳನ್ನ ಅಳವಡಿಕೆ ಮಾಡಲಾಗಿದೆ. ರಸ್ತೆ ಬದಿಯಲ್ಲಿನ ಮರ ಹಾಗೂ ಕಟ್ಟಡಗಳಿಗೆ ಪೋಸ್ಟರ್ಗಳನ್ನ ಅಳವಡಿಕೆ ಮಾಡಲಾಗಿದೆ.
ಆಹಾರ ಕಿಟ್ ಅವ್ಯವಹಾರಕ್ಕೆ ಕಿಡಿ ;
ಕಾರ್ಮಿಕ ಇಲಾಖೆಯಲ್ಲಿನ ಆಹಾರದ ಕಿಟ್ ಸ್ಕ್ಯಾಮ್ಗೆ ಪೇ ಮಾಡಿ ಡೀಲ್ ನಿಮ್ದು ಕಮಿಷನ್ ನಮ್ದು ಎಂದು ಬರೆದಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪೋಟೋ ಸಹಿತದ ಪೋಸ್ಟರ್ ಅಳವಡಿಕೆಯಾಗಿದೆ. ಇದು ಸ್ಥಳೀಯ ಬಿಜೆಪಿಗರಿಗೆ ಮುಜುಗರ ತಂದಿದೆ.
ದಿನವೂ ಮುಖ್ಯಮಂತ್ರಿಗಳು ಬರಲಿ ಎಂದ ಜನರು;
ಸಿಎಂ ಆಗಮನ ಹಿನ್ನೆಲೆ ರಸ್ತೆ ಸಮಸ್ಯೆ ಸರಿಪಡಿಸಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿರುವ ಸ್ಥಳೀಯ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಗಳು ದಿನವೂ ಜಿಲ್ಲೆಗೆ ಬರುವವರಾಲಿ. ಆಗಲಾದರೂ ರಸ್ತೆಗಳು ಹೊಂಡಗುಂಡಿ ಮುಕ್ತವಾಗಲಿದೆ ಎಂದು ಪೋಸ್ಟ್ ಹಾಕಿದ್ದಾರೆ.
Pay CM sticker campaign in Sirsi ahead of CM Bommai arriving to inaugurate Kadambotsava.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 04:34 pm
HK News Staffer
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am