ಬ್ರೇಕಿಂಗ್ ನ್ಯೂಸ್
28-02-23 12:32 pm HK News Desk ಕರ್ನಾಟಕ
ಶಿರಸಿ, ಫೆ 28: ತಾಲ್ಲೂಕಿನ ಬನವಾಸಿಗೆ ಮಂಗಳವಾರ ಕದಂಬೋತ್ಸವ ಉದ್ಘಾಟನೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಣಕಿಸುವಂತೆ ಪಟ್ಟಣದ ಹಲವೆಡೆ ಪೇ ಸಿ.ಎಂ. ಪೋಸ್ಟರ್ ಸೋಮವಾರ ರಾತ್ರಿ ಅಂಟಿಸಲಾಗಿದೆ.
ರಾಜ್ಯದ ಹಲವೆಡೆ ನಡೆಯುತ್ತಿದ್ದ ಪೇ ಸಿಎಂ ಪೋಸ್ಟರ್ ಅಭಿಯಾನ ಈಗ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕ್ಷೇತ್ರಕ್ಕೂ ಕಾಲಿಟ್ಟಿದೆ.
ಸಿ.ಎಂ ಬರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪೋಸ್ಟರ್ ಅನ್ನು ಹಾಕಿ ಆಹಾರದ 'ಕಿಟ್ ಸ್ಕ್ಯಾಮ್ಗೆ ಪೇ ಸಿಎಂ ಮಾಡಿ' ಹಾಗೂ 'ಡೀಲ್ ನಿಮ್ದು, ಕಮಿಷನ್ ನಮ್ದು' ಎಂದು ಬರೆದು ಬನವಾಸಿಯ ರಸ್ತೆಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆದಿದೆ.
ಕಂದಬೋತ್ಸವ ಹಾಗೂ ವಿವಿಧ ಕಾರ್ಯಕ್ರಮಕ್ಕಾಗಿ ಮಂಗಳವಾರ ಸಂಜೆ ಶಿರಸಿ ಮತ್ತು ಸಿದ್ದಾಪುರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆಸಲಾಗಿದೆ. ಪೇ ಸಿಎಂ ಜತೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿರುದ್ಧ ಪೋಸ್ಟರ್ ಗಳನ್ನ ಅಂಟಿಸಲಾಗಿದೆ.
ಸಿಎಂ ಸಂಚರಿಸುವ ಮಾರ್ಗದಲ್ಲಿ ಪೋಸ್ಟರ್ ;
ಸಿಎಂ ಸಂಚರಿಸುವ ಬನವಾಸಿಯ ರಸ್ತೆಯುದ್ದಕ್ಕೂ ಪೇ ಸಿಎಂ ಪೋಸ್ಟರ್ ಗಳನ್ನ ಅಳವಡಿಕೆ ಮಾಡಲಾಗಿದೆ. ರಸ್ತೆ ಬದಿಯಲ್ಲಿನ ಮರ ಹಾಗೂ ಕಟ್ಟಡಗಳಿಗೆ ಪೋಸ್ಟರ್ಗಳನ್ನ ಅಳವಡಿಕೆ ಮಾಡಲಾಗಿದೆ.
ಆಹಾರ ಕಿಟ್ ಅವ್ಯವಹಾರಕ್ಕೆ ಕಿಡಿ ;
ಕಾರ್ಮಿಕ ಇಲಾಖೆಯಲ್ಲಿನ ಆಹಾರದ ಕಿಟ್ ಸ್ಕ್ಯಾಮ್ಗೆ ಪೇ ಮಾಡಿ ಡೀಲ್ ನಿಮ್ದು ಕಮಿಷನ್ ನಮ್ದು ಎಂದು ಬರೆದಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪೋಟೋ ಸಹಿತದ ಪೋಸ್ಟರ್ ಅಳವಡಿಕೆಯಾಗಿದೆ. ಇದು ಸ್ಥಳೀಯ ಬಿಜೆಪಿಗರಿಗೆ ಮುಜುಗರ ತಂದಿದೆ.
ದಿನವೂ ಮುಖ್ಯಮಂತ್ರಿಗಳು ಬರಲಿ ಎಂದ ಜನರು;
ಸಿಎಂ ಆಗಮನ ಹಿನ್ನೆಲೆ ರಸ್ತೆ ಸಮಸ್ಯೆ ಸರಿಪಡಿಸಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿರುವ ಸ್ಥಳೀಯ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಗಳು ದಿನವೂ ಜಿಲ್ಲೆಗೆ ಬರುವವರಾಲಿ. ಆಗಲಾದರೂ ರಸ್ತೆಗಳು ಹೊಂಡಗುಂಡಿ ಮುಕ್ತವಾಗಲಿದೆ ಎಂದು ಪೋಸ್ಟ್ ಹಾಕಿದ್ದಾರೆ.
Pay CM sticker campaign in Sirsi ahead of CM Bommai arriving to inaugurate Kadambotsava.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm