ಬ್ರೇಕಿಂಗ್ ನ್ಯೂಸ್
28-02-23 12:32 pm HK News Desk ಕರ್ನಾಟಕ
ಶಿರಸಿ, ಫೆ 28: ತಾಲ್ಲೂಕಿನ ಬನವಾಸಿಗೆ ಮಂಗಳವಾರ ಕದಂಬೋತ್ಸವ ಉದ್ಘಾಟನೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಣಕಿಸುವಂತೆ ಪಟ್ಟಣದ ಹಲವೆಡೆ ಪೇ ಸಿ.ಎಂ. ಪೋಸ್ಟರ್ ಸೋಮವಾರ ರಾತ್ರಿ ಅಂಟಿಸಲಾಗಿದೆ.
ರಾಜ್ಯದ ಹಲವೆಡೆ ನಡೆಯುತ್ತಿದ್ದ ಪೇ ಸಿಎಂ ಪೋಸ್ಟರ್ ಅಭಿಯಾನ ಈಗ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕ್ಷೇತ್ರಕ್ಕೂ ಕಾಲಿಟ್ಟಿದೆ.
ಸಿ.ಎಂ ಬರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪೋಸ್ಟರ್ ಅನ್ನು ಹಾಕಿ ಆಹಾರದ 'ಕಿಟ್ ಸ್ಕ್ಯಾಮ್ಗೆ ಪೇ ಸಿಎಂ ಮಾಡಿ' ಹಾಗೂ 'ಡೀಲ್ ನಿಮ್ದು, ಕಮಿಷನ್ ನಮ್ದು' ಎಂದು ಬರೆದು ಬನವಾಸಿಯ ರಸ್ತೆಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆದಿದೆ.
ಕಂದಬೋತ್ಸವ ಹಾಗೂ ವಿವಿಧ ಕಾರ್ಯಕ್ರಮಕ್ಕಾಗಿ ಮಂಗಳವಾರ ಸಂಜೆ ಶಿರಸಿ ಮತ್ತು ಸಿದ್ದಾಪುರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆಸಲಾಗಿದೆ. ಪೇ ಸಿಎಂ ಜತೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿರುದ್ಧ ಪೋಸ್ಟರ್ ಗಳನ್ನ ಅಂಟಿಸಲಾಗಿದೆ.
ಸಿಎಂ ಸಂಚರಿಸುವ ಮಾರ್ಗದಲ್ಲಿ ಪೋಸ್ಟರ್ ;
ಸಿಎಂ ಸಂಚರಿಸುವ ಬನವಾಸಿಯ ರಸ್ತೆಯುದ್ದಕ್ಕೂ ಪೇ ಸಿಎಂ ಪೋಸ್ಟರ್ ಗಳನ್ನ ಅಳವಡಿಕೆ ಮಾಡಲಾಗಿದೆ. ರಸ್ತೆ ಬದಿಯಲ್ಲಿನ ಮರ ಹಾಗೂ ಕಟ್ಟಡಗಳಿಗೆ ಪೋಸ್ಟರ್ಗಳನ್ನ ಅಳವಡಿಕೆ ಮಾಡಲಾಗಿದೆ.
ಆಹಾರ ಕಿಟ್ ಅವ್ಯವಹಾರಕ್ಕೆ ಕಿಡಿ ;
ಕಾರ್ಮಿಕ ಇಲಾಖೆಯಲ್ಲಿನ ಆಹಾರದ ಕಿಟ್ ಸ್ಕ್ಯಾಮ್ಗೆ ಪೇ ಮಾಡಿ ಡೀಲ್ ನಿಮ್ದು ಕಮಿಷನ್ ನಮ್ದು ಎಂದು ಬರೆದಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪೋಟೋ ಸಹಿತದ ಪೋಸ್ಟರ್ ಅಳವಡಿಕೆಯಾಗಿದೆ. ಇದು ಸ್ಥಳೀಯ ಬಿಜೆಪಿಗರಿಗೆ ಮುಜುಗರ ತಂದಿದೆ.
ದಿನವೂ ಮುಖ್ಯಮಂತ್ರಿಗಳು ಬರಲಿ ಎಂದ ಜನರು;
ಸಿಎಂ ಆಗಮನ ಹಿನ್ನೆಲೆ ರಸ್ತೆ ಸಮಸ್ಯೆ ಸರಿಪಡಿಸಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿರುವ ಸ್ಥಳೀಯ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಗಳು ದಿನವೂ ಜಿಲ್ಲೆಗೆ ಬರುವವರಾಲಿ. ಆಗಲಾದರೂ ರಸ್ತೆಗಳು ಹೊಂಡಗುಂಡಿ ಮುಕ್ತವಾಗಲಿದೆ ಎಂದು ಪೋಸ್ಟ್ ಹಾಕಿದ್ದಾರೆ.
Pay CM sticker campaign in Sirsi ahead of CM Bommai arriving to inaugurate Kadambotsava.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm