ಮಾ. 1ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ;  ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ, ತುರ್ತು ಆರೋಗ್ಯ ಸೇವೆ, ಸಾರಿಗೆ  ಲಭ್ಯ

28-02-23 12:59 pm       Bangalore Correspondent   ಕರ್ನಾಟಕ

ಮಾ. 1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗಲಿದೆ. ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಪ್ರಸ್ತಾವನೆಯನ್ನು ಮಂಡಿಸದೇ ಇರುವುದನ್ನು ವಿರೋಧಿಸಿ ಹಾಗೂ ನೂತನ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್ ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಮುಂದಿಟ್ಟುಕೊಂಡು ಸರ್ಕಾರಿ ನೌಕರರು ಮುಷ್ಕರಕ್ಕೆ ಇಳಿಯಲು ನಿರ್ಧರಿಸಿದ್ದಾರೆ.

ಬೆಂಗಳೂರು, ಫೆ 28: ಮಾ. 1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗಲಿದೆ. ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಪ್ರಸ್ತಾವನೆಯನ್ನು ಮಂಡಿಸದೇ ಇರುವುದನ್ನು ವಿರೋಧಿಸಿ ಹಾಗೂ ನೂತನ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್ ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಮುಂದಿಟ್ಟುಕೊಂಡು ಸರ್ಕಾರಿ ನೌಕರರು ಮುಷ್ಕರಕ್ಕೆ ಇಳಿಯಲು ನಿರ್ಧರಿಸಿದ್ದಾರೆ.

ಜನರ ಮೂಲಭೂತ ಅವಶ್ಯಕತೆಗಳಿಗೆ ಸಂಬಂಧಿಸಿದ ಆರೋಗ್ಯ, ಶಿಕ್ಷಣ, ನಾಗರಿಕ ಸೇವಾ ವಲಯಕ್ಕೆ ಸಂಬಂಧಿಸಿದ ಇಲಾಖೆಗಳ ನೌಕರರು, ಅರಣ್ಯ ಇಲಾಖೆ, ವಿವಿಧ ನಿಗಮ, ಮಂಡಳಿಗಳ ನೌಕರರು ಸೇರಿ ಹಲವಾರು ಇಲಾಖೆಗಳು ಈ ಮುಷ್ಕರಕ್ಕೆ ಕೈ ಜೋಡಿಸಿವೆ. ಮಾ. 1ರಿಂದ ತಮ್ಮ ಕರ್ತವ್ಯಕ್ಕೆ ಹಾಜರಾಗದೇ ಗೈರು ಆಗುವ ಮೂಲಕ ಸರ್ಕಾರಿ ನೌಕರರು ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ. ಇದರಿಂದ, ಹಲವಾರು ಇಲಾಖೆಗಳ ಸೇವೆಗಳು ಅಲಭ್ಯವಾಗುವ ಸಾಧ್ಯತೆಗಳಿವೆ.

ತುರ್ತು ಸೇವೆಗಳಾದ ತುರ್ತು ಆರೋಗ್ಯ ಸೇವೆಗಳು, ಒಳರೋಗಿಗಳ ಸೇವೆಗಳು ದೊರಕಲಿವೆ. ಸರ್ಕಾರಿ ಸಾರಿಗೆ ಬಸ್ಸುಗಳ ಸಂಚಾರ ಇರುತ್ತದೆ. ಉನ್ನತ ಶಿಕ್ಷಣದ ಭಾಗವಾದ ವಿಶ್ವವಿದ್ಯಾಲಯಗಳಲ್ಲಿ ಪಾಠ, ಪ್ರವಚನಗಳು ನಡೆಯಲಿವೆ.

Most of the services, barring a couple of essential services, like transport, crematoriums and critical care hospitals, are likely to be hit with the state government employees deciding to go on indefinite strike from Wednesday (March 1) seeking fulfilment of their various demands. Karnataka State Government Employees' Association president C S Shadakshari said that all services, revenue, agriculture, horticulture offices and revenue collection, schools and pre-university examinations, will be hit and 80,000 employees, working in various energy supply companies, are extending the support to the strike.