ಬ್ರೇಕಿಂಗ್ ನ್ಯೂಸ್
28-02-23 03:06 pm HK News Desk ಕರ್ನಾಟಕ
ಶಿವಮೊಗ್ಗ, ಫೆ.28 : ರಾಷ್ಟ್ರೀಯ ರಕ್ಷಾ ಯೂನಿವರ್ಸಿಟಿ ನಮ್ಮ ರಾಜ್ಯಕ್ಕೆ ಸ್ಯಾಂಕ್ಷನ್ ಆಗಿದೆ. ಅದಕ್ಕಾಗಿ ಶಿವಮೊಗ್ಗ ಜಿಲ್ಲೆಯ ನವುಲೆಯಲ್ಲಿ 8 ಎಕರೆ ಜಾಗ ಗುರುತಿಸಲಾಗಿದೆ. ಅಲ್ಲಿ ಸುಸಜ್ಜಿತ ಕಟ್ಟಡ, ಮೂಲಸೌಕರ್ಯ ಇರುವಂತಹ ಕ್ಯಾಂಪಸ್ ರಚಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಸಲದ ಶೈಕ್ಷಣಿಕ ವರ್ಷದಲ್ಲಿ ಕೇಂದ್ರ ಆರಂಭಕ್ಕೆ ರಾಗಿಗುಡ್ಡದಲ್ಲಿ ಕಟ್ಟಡ ನೀಡಲಾಗಿದೆ. ಮಿಲಿಟರಿ ಮತ್ತು ಆಂತರಿಕ ಭದ್ರತಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ಬೋಧನೆ ಇಲ್ಲಿ ಆಗುತ್ತದೆ. ಸೈಬರ್ ಸೇರಿದಂತೆ, ವಿವಿಧ ಕೋರ್ಸುಗಳು ಇಲ್ಲಿ ಬರಲಿದೆ. ಪಿಯುಸಿ ಬಳಿಕದ ಕೋರ್ಸ್ ಇದಾಗಿದ್ದು ಶಿವಮೊಗ್ಗದ ವಿದ್ಯಾರ್ಥಿಗಳಿಗೆ ಹೊಸ ದಿಕ್ಕು ತೋರಿಸಲಿದೆ. ಇತ್ತೀಚೆಗೆ ಅಹಮದಾಬಾದ್ ನಲ್ಲಿ ಈ ಯೂನಿವರ್ಸಿಟಿ ಇರುವಲ್ಲಿಗೆ ಭೇಟಿ ಕೊಟ್ಟಿದ್ದೆವು. ಅಹಮದಾಬಾದ್ ಬಿಟ್ಟರೆ, ಶಿವಮೊಗ್ಗದಲ್ಲೇ ಈ ಕೇಂದ್ರ ಆರಂಭವಾಗುತ್ತಿದೆ.
ಕರ್ನಾಟಕ ಪೊಲೀಸ್ ಗೆ ಪ್ರತಿ ವರ್ಷ 5 ಸಾವಿರ ಜನರನ್ನು ತೆಗೆದುಕೊಳ್ಳುತ್ತೇವೆ. ಹೀಗಾಗಿ ಈ ಯೂನಿವರ್ಸಿಟಿ ನಮಗೆ ಉಪಯೋಗಕ್ಕೆ ಬರುತ್ತದೆ. ಇಲ್ಲಿ ಕೋರ್ಸ್ ಮುಗಿಸಿದ ಅಭ್ಯರ್ಥಿಗಳು ನೇರವಾಗಿ ಪೊಲೀಸ್ ಡ್ಯೂಟಿಗೆ ಹೋಗಬಹುದಾಗಿದೆ. ಎಕ್ಸಾಂ ಬರೆದು ಪೊಲೀಸ್ ಇಲಾಖೆ ಸೇರಿದವರಿಗೆ 8 ತಿಂಗಳ ಕಾಲ ಟ್ರೈನಿಂಗ್ ನೀಡುತ್ತೇವೆ. ಅದರ ಬದಲಾಗಿ ಈ ಕೋರ್ಸ್ ಪರ್ಯಾಯವಾಗಿದೆ ಎಂದು ಹೇಳಿದರು.
ಸರ್ಕಾರಿ ನೌಕರರ ಮುಷ್ಕರ ಬಗ್ಗೆ ಕೇಳಿದ ಪ್ರಶ್ನೆಗೆ, ಈ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಲಿದ್ದಾರೆ. ಕಾನೂನು ಸುವ್ಯವಸ್ಥೆ ನೀಡಲು ಇಲಾಖೆ ಸಜ್ಜಾಗಿದೆ. ಸರ್ಕಾರಿ ನೌಕರರು ಕಾನೂನು ಸುವ್ಯವಸ್ಥೆ ಹಾಳು ಮಾಡುವುದಿಲ್ಲ ಎಂದರು.

ಪಿ.ಎಸ್.ಐ. ಮರು ನೇಮಕಾತಿ ಕುರಿತ ಪ್ರಶ್ನೆಗೆ, ಕೋರ್ಟ್ ಆರ್ಡರ್ ನಿರೀಕ್ಷೆ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್ ನಲ್ಲಿ ಈ ವಿಚಾರವಿದೆ. ಅದು ಬಂದ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು. ರೌಡಿ ಶೀಟರ್ ಪಟ್ಟಿಯಿಂದ ಅತಿ ಹೆಚ್ಚು ರೌಡಿಗಳನ್ನು ಬಿಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನಾವು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರನ್ನ ರಾಜಕೀಯವಾಗಿ ರೌಡಿ ಪಟ್ಟಿಗೆ ಸೇರಿಸುತ್ತಾರೆ. ಹಾಗಾಗಿ ಅವರ ಬ್ಯಾಕ್ ಗ್ರೌಂಡ್ ನೋಡಿಕೊಂಡು ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.
Raksha University to come up in Shivamogga, allotments to police department made easier.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm