ಬ್ರೇಕಿಂಗ್ ನ್ಯೂಸ್
01-03-23 02:29 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1 : ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರು ಕೈಗೊಂಡಿದ್ದ ಮುಷ್ಕರ ಕೈಬಿಟ್ಟಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಹಣಕಾಸು ಇಲಾಖೆಯ ಮೂಲಕ ಆದೇಶ ಹೊರಡಿಸಿದ್ದಾರೆ. ತುರ್ತಾಗಿ 17 ಶೇ.ದಷ್ಟು ವೇತನ ಹೆಚ್ಚಿಸಲ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ. ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ನೌಕರರ ವಿವಿಧ ಸಂಘಟನೆಗಳ ಪ್ರಮುಖರ ಜತೆ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಈ ಕುರಿತು ಹೇಳಿಕೆ ನೀಡಿದ್ದಾರೆ.
ಈಗಾಗಲೇ ಏಳನೇ ವೇತನ ಆಯೋಗವನ್ನು ನೇಮಿಸಲಾಗಿದೆ. ಅವರಿಂದ ವರದಿ ಪಡೆದು ಶೀಘ್ರದಲ್ಲಿ ವೇತನ ಪರಿಷ್ಕರಣೆ ನಡೆಸಲಾಗುವುದು. ಈಗ ಮಧ್ಯಂತರ ಪರಿಹಾರ ಘೋಷಿಸಲು ನಿರ್ಧರಿಸಲಾಗಿದೆ ಎಂದರು. ಹಳೆಯ ಪಿಂಚಣಿ ಪದ್ಧತಿ ಮರು ಜಾರಿಗೊಳಿಸಬೇಕೆಂಬ ಬೇಡಿಕೆಯನ್ನು ನೌಕರರ ಸಂಘ ಮುಂದಿಟ್ಟಿತ್ತು. ಈ ಬಗ್ಗೆ ಅಧ್ಯಯನಕ್ಕಾಗಿ ಹಣಕಾಸು ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು. ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿರುವ ಪಿಂಚಣಿ ಪದ್ಧತಿ ಕುರಿತು ಸಮಿತಿ ವರದಿ ನೀಡಲಿದೆ ಎಂದು ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ಜೊತೆಗಿನ ಸಭೆಯ ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ವಿವಿಧ ಸಂಘಟನೆಗಳ ಪ್ರಮುಖರ ಜೊತೆಗೆ ಮಾತುಕತೆ ನಡೆಸಿ ಮುಷ್ಕರ ಅಂತ್ಯಗೊಳಿಸುವ ಘೋಷಣೆ ಮಾಡಿದರು. ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳ ಮತ್ತು ಎನ್ಪಿಎಸ್ ಮರು ಜಾರಿ ಕುರಿತು ಅಧ್ಯಯನಕ್ಕೆ ಸಮಿತಿ ನೇಮಿಸುವ ತೀರ್ಮಾನವನ್ನು ಒಪ್ಪಿಕೊಂಡು ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ’ ಎಂದರು. ಶೇಕಡ 40ರಷ್ಟು ವೇತನ ಹೆಚ್ಚಳ ಸೇರಿದಂತೆ ಎಲ್ಲ ಬೇಡಿಕೆಗಳು ಈಡೇರಬೇಕು. ಈಗ ತಾತ್ಕಾಲಿಕವಾಗಿ ಮುಷ್ಕರ ಸ್ಥಗಿತವಾಗಲಿದೆ. ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದರು
On the day the state government employees embarked on their indefinite strike to demand implementation of the 7th Pay Commission interim report and switching back to the Old Pension Scheme, Chief Minister Basavaraj Bommai on Wednesday announced a 17 per cent interim wage relief for the employees. Speaking to reporters, the CM said, “We have held discussions with officials of the Finance Department. We also held discussions with representatives of the various state government employees’ unions and we have come to an agreement.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm