ಬ್ರೇಕಿಂಗ್ ನ್ಯೂಸ್
02-03-23 06:22 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.2: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡಬೇಕೆಂಬ ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸಲು ಶಿಕ್ಷಣ ಇಲಾಖೆ ನಿರಾಕರಿಸಿದೆ. ಈ ಕುರಿತ ಮನವಿಯನ್ನು ಪರಿಗಣಿಸದಂತೆ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೂಚಿಸಿದ್ದಾರೆ.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆ ಮತ್ತು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ನಾಗೇಶ್, ಹಿಜಾಬ್ ವಿಷಯವು ಸುಪ್ರೀಂ ಕೋರ್ಟ್ನಲ್ಲಿದೆ. ಹೀಗಾಗಿ, ಪರೀಕ್ಷೆ ಸಮಯದಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವ ಪ್ರಶ್ನೆ ಬರುವುದಿಲ್ಲ ಎಂದಿದ್ದಾರೆ. ಅಲ್ಲದೆ, ಹಿಜಾಬ್ ಕಾರಣಕ್ಕೆ ಯಾವುದೇ ವಿದ್ಯಾರ್ಥಿನಿ ಪರೀಕ್ಷೆಗೆ ಗೈರಾಗುತ್ತಾರೆ ಎಂದು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ ಎಂದು ರಾಜ್ಯ ಹೈಕೋರ್ಟ್ ಕಳೆದ ವರ್ಷ ಮಾರ್ಚ್ನಲ್ಲಿ ಅಭಿಪ್ರಾಯಪಟ್ಟಿತ್ತು. ಅಲ್ಲದೆ, ವಿದ್ಯಾರ್ಥಿಗಳು ಆಯಾ ಕಾಲೇಜು ಆಡಳಿತ ನಿಗದಿಪಡಿಸಿದ ಸಮವಸ್ತ್ರವನ್ನೇ ಧರಿಸಬೇಕು ಎಂದು 2022ರ ಫೆ.5ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದರಿಂದ ಹಿಜಾಬ್ ಪರ ಹೋರಾಟಗಾರರಿಗೆ ಹಿನ್ನಡೆಯಾಗಿತ್ತು. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದು ಸದ್ಯ ವಿಚಾರಣೆ ಹಂತದಲ್ಲಿದೆ. ಈ ನಡುವೆ, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗಿದೆ. ಆ ಕುರಿತ ತೀರ್ಪು ಇನ್ನೂ ಬಂದಿಲ್ಲ. ಇದೇ ಮಾರ್ಚ್ 10ರಿಂದ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.
Karnataka education board denies Writing exams with hijab Muslim Students
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm