ಬ್ರೇಕಿಂಗ್ ನ್ಯೂಸ್
02-03-23 06:22 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.2: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡಬೇಕೆಂಬ ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸಲು ಶಿಕ್ಷಣ ಇಲಾಖೆ ನಿರಾಕರಿಸಿದೆ. ಈ ಕುರಿತ ಮನವಿಯನ್ನು ಪರಿಗಣಿಸದಂತೆ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೂಚಿಸಿದ್ದಾರೆ.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆ ಮತ್ತು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ನಾಗೇಶ್, ಹಿಜಾಬ್ ವಿಷಯವು ಸುಪ್ರೀಂ ಕೋರ್ಟ್ನಲ್ಲಿದೆ. ಹೀಗಾಗಿ, ಪರೀಕ್ಷೆ ಸಮಯದಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವ ಪ್ರಶ್ನೆ ಬರುವುದಿಲ್ಲ ಎಂದಿದ್ದಾರೆ. ಅಲ್ಲದೆ, ಹಿಜಾಬ್ ಕಾರಣಕ್ಕೆ ಯಾವುದೇ ವಿದ್ಯಾರ್ಥಿನಿ ಪರೀಕ್ಷೆಗೆ ಗೈರಾಗುತ್ತಾರೆ ಎಂದು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ ಎಂದು ರಾಜ್ಯ ಹೈಕೋರ್ಟ್ ಕಳೆದ ವರ್ಷ ಮಾರ್ಚ್ನಲ್ಲಿ ಅಭಿಪ್ರಾಯಪಟ್ಟಿತ್ತು. ಅಲ್ಲದೆ, ವಿದ್ಯಾರ್ಥಿಗಳು ಆಯಾ ಕಾಲೇಜು ಆಡಳಿತ ನಿಗದಿಪಡಿಸಿದ ಸಮವಸ್ತ್ರವನ್ನೇ ಧರಿಸಬೇಕು ಎಂದು 2022ರ ಫೆ.5ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದರಿಂದ ಹಿಜಾಬ್ ಪರ ಹೋರಾಟಗಾರರಿಗೆ ಹಿನ್ನಡೆಯಾಗಿತ್ತು. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದು ಸದ್ಯ ವಿಚಾರಣೆ ಹಂತದಲ್ಲಿದೆ. ಈ ನಡುವೆ, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗಿದೆ. ಆ ಕುರಿತ ತೀರ್ಪು ಇನ್ನೂ ಬಂದಿಲ್ಲ. ಇದೇ ಮಾರ್ಚ್ 10ರಿಂದ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.
Karnataka education board denies Writing exams with hijab Muslim Students
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm