ಬ್ರೇಕಿಂಗ್ ನ್ಯೂಸ್
03-03-23 06:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3: ತಮ್ಮ ಪುತ್ರ ಹಾಗೂ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ವಿರುದ್ಧ ನಡೆದ ಲೋಕಾಯುಕ್ತ ದಾಳಿಯ ಕಾರಣಕ್ಕೆ, ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಯಮಿತ (ಕೆಎಸ್ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಲೋಕಾಯುಕ್ತ ದಾಳಿಯಿಂದ ರಾಜ್ಯ ಸರ್ಕಾರಕ್ಕೆ ಎದುರಾಗುವ ಮುಜುಗರವನ್ನು ತಪ್ಪಿಸಲು, ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ತಮ್ಮ ಆಪ್ತರ ಮೂಲಕ ಕೆಎಸ್ಡಿಎಲ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು, ಮಾಡಾಳ್ ವಿರೂಪಾಪಕ್ಷಪ್ಪ ಅವರಿಗೆ ಸಿಎಂ ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತಮ್ಮ ಆಪ್ತರ ಮೂಲಕ ಸಿಎಂ ಕಚೇರಿಗೆ ರಾಜೀನಾಮೆ ಪತ್ರವನ್ನು ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಕೆ ಮಾಡಿದ್ದಾರೆ. ಪತ್ರದಲ್ಲಿ, ''2.03.2023ರಂದು ನಡೆದ ಲೋಕಾಯುಕ್ತ ದಾಳಿಗೂ ನನಗೂ ಸಂಬಂಧವಿಲ್ಲ. ಇದು ನನ್ನ ಕುಟುಂಬದ ವಿರುದ್ಧ ಹೆಣೆಯಲಾಗಿರುವ ಷಡ್ಯಂತ್ರ. ಆದರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ. ನಾನು ನೈತಿಕ ಹೊಣೆ ಹೊತ್ತು ಕೆಎಸ್ಡಿಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ..'' ಎಂದು ವಿರೂಪಾಕ್ಷಪ್ಪ ಉಲ್ಲೇಖ ಮಾಡಿದ್ದಾರೆ.
ಶ್ರೇಯಸ್ ಕಶ್ಯಪ್ ಅವರು ನೀಡಿದ್ದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಮಾಡಾಳ್ ವಿರೂಪಾಕ್ಷಪ್ಪ ಎ1(ಮೊದಲ ಆರೋಪಿ) ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2(2ನೇ ಆರೋಪಿ), ಕೆಎಸ್ಡಿಎಲ್ ಅಕೌಂಟೆಂಟ್ ಸುರೇಂದ್ರ ಎ3, ಮಾಡಾಳ್ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆಗಿದ್ದಾರೆ.
ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಭೀತಿ ಎದುರಾಗಿದ್ದು, ಜಾಮೀನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.
ಇನ್ನೊಂದೆಡೆ ಶಾಸಕರಿಗಾಗಿ ಲೋಕಾಯುಕ್ತ ಪೊಲೀಸರ ಮೂರು ತಂಡಗಳಿಂದ ಹುಟುಕಾಟ ನಡೆಸಲಾಗುತ್ತಿದೆ. ಚನ್ನೇಶಪುರ ಗ್ರಾಮದಲ್ಲಿರುವ ಶಾಸಕರ ನಿವಾಸ, ಮಾವಿನಹೊಳೆ ಬಳಿ ಇರುವ ಮಾಡಾಳ್ ಕುಟುಂಬದ ಕ್ರಷರ್ ಕಚೇರಿ, ಮಾವಿನಕಟ್ಟೆ ಗ್ರಾಮದ ಬಳಿ ಇರುವ ತೋಟದ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, 20 ಮಂದಿಯಿಂದ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಚಿನ್ನ, ಅಪಾರ ಪ್ರಮಾಣದ ಆಸ್ತಿ ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.
Facing heat from the anti-corruption wing of Lokayukta, Karnataka BJP MLA Madal Virupakshappa has resigned as the chairman of Karnataka Soaps and Detergents Limited, the manufacturer of Mysore Sandal Soap.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm