ಬ್ರೇಕಿಂಗ್ ನ್ಯೂಸ್
03-03-23 10:48 pm HK News Desk ಕರ್ನಾಟಕ
ಹಾಸನ, ಮಾ.3: ಮದುವೆಗೆ ತಯಾರಿ ನಡೆಸುತ್ತಿದ್ದ ಮದು ಮಗಳೊಬ್ಬಳು ಬ್ಯೂಟಿ ಪಾರ್ಲರಿನಲ್ಲಿ ಮೇಕಪ್ ಮಾಡಲು ಹೋಗಿ ಮುಖದಲ್ಲಿ ಅಲರ್ಜಿ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಹಾಸನದಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಪೊಲೀಸರು ಮೇಕಪ್ ಮಾಡಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಶುಕ್ರವಾರ ಘಟನೆ ಬೆಳಕಿಗೆ ಬಂದಿದ್ದು, ಯುವತಿಯ ಮುಖ ಊದಿಕೊಂಡಿದೆ, ಅಲರ್ಜಿ, ತುರಿಕೆಯಿಂದ ಚರ್ಮ ಸುಕ್ಕುಗಟ್ಟಿದ್ದು, ಆಸ್ಪತ್ರೆಯಲ್ಲಿ ಐಸಿಯುನಲ್ಲಿ ದಾಖಲು ಮಾಡಲಾಗಿದೆ.
ಅರಸೀಕೆರೆಯ ಜಾಜೂರು ಗ್ರಾಮದ ಯುವತಿಯ ಮದುವೆ ನಿಶ್ಚಯವಾಗಿತ್ತು. ಇದಕ್ಕಾಗಿ ಮುಖದ ಮೇಕಪ್ ಮಾಡಲು ಅರಸೀಕೆರೆಯ ಗಂಗಶ್ರೀ ಹರ್ಬಲ್ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಕೇಂದ್ರಕ್ಕೆ ತೆರಳಿದ್ದಳು. ಹತ್ತು ದಿನಗಳ ಹಿಂದೆ ಮೇಕಪ್ ಮಾಡಲು ಹೋಗಿದ್ದು ಬ್ಯೂಟೀಶಿಯನ್ ಗಂಗಾ ಯುವತಿಗೆ ವಿಶೇಷ ರೀತಿಯ ಮೇಕಪ್ ಮಾಡುವುದಾಗಿ ತಿಳಿಸಿದ್ದಳು. ಮೇಕಪ್ ಲೇಪ ಮೆತ್ತಿದೊಡನೆ ಯುವತಿಯ ಮುಖದಲ್ಲಿ ಅಲರ್ಜಿ ಉಂಟಾಗಿದ್ದು, ತುರಿಕೆಯಿಂದ ಮುಖ ಊದಿಕೊಂಡಿದೆ. ಇದರಿಂದ ಮದುವೆಯನ್ನು ಪೋಸ್ಟ್ ಪೋನ್ ಮಾಡಲಾಗಿದೆ.
ಇದೇ ವೇಳೆ, ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬ್ಯೂಟೀಶಿಯನ್ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A beautician in Karnataka’s Hassan was detained for questioning after a young woman who got her makeup done for her wedding was admitted to the Intensive Care Unit (ICU) after her face got disfigured, police said on Friday.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 09:38 pm
HK News Staffer
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm