ಬ್ರೇಕಿಂಗ್ ನ್ಯೂಸ್
05-03-23 01:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ನಗರದ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಎನ್ಐಎ ಅಧಿಕಾರಿಗಳು ಆರೋಪಿ ತುಫೈಲ್ ಬಗ್ಗೆ ಸುಳಿವು ಕೊಟ್ಟವರಿಗೆ ರೂ. 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ಸುಮಾರು 10ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ತುಫೈಲ್ ಮನೆ ಬಳಿಗೆ ಹೋಗಿದ್ದಾರೆ. ಇಬ್ಬರು ಅಧಿಕಾರಿಗಳು ಫ್ಲಂಬರ್ ಕಾರ್ಮಿಕರ ಸೋಗಿನಲ್ಲಿ ಮನೆಯ ಒಳನುಗ್ಗಿದ್ದರು. ಈ ವೇಳೆ ತುಫೈಲ್ ಮನೆ ಒಳಗೆ ಮಟನ್ ಕತ್ತರಿಸುತ್ತಿರುವುದು ಕಂಡುಬಂದಿದೆ.

ಒಳಗೆ ಬಂದಿದ್ದ ಅಧಿಕಾರಿಗಳು ಆರೋಪಿ ತುಫೈಲ್ ಅನ್ನುವುದನ್ನು ದೃಢಪಡಿಸುತ್ತಿದ್ದಂತೆ ಮತ್ತಿಬ್ಬರು ಅಧಿಕಾರಿಗಳು ಒಳಗೆ ಬಂದಿದ್ದರು. ಇದನ್ನು ನೋಡಿದ ತುಫೈಲ್, ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದರ ಬೆನ್ನಲ್ಲೇ ಇತರೇ ಅಧಿಕಾರಿಗಳು ಏಕಕಾಲಕ್ಕೆ ಮನೆಗೆ ನುಗ್ಗಿದ್ದು ಆರೋಪಿಯನ್ನು ಲಾಕ್ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಐದು ಮಂದಿ ಪ್ರಮುಖ ಆರೋಪಿಗಳು ಎನ್ಐಎ ಅಧಿಕಾರಿಗಳ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಆ ಪೈಕಿ ಮಡಿಕೇರಿಯ ತುಫೈಲ್ ಹತ್ಯೆಗೈದ ನಾಲ್ವರು ಪರಾರಿಯಾಗಲು ಮತ್ತು ಅಡಗುತಾಣಕ್ಕೆ ಸಹಕಾರ ನೀಡಿದ್ದ ಎನ್ನಲಾಗಿದೆ.
Praveen Nettaru murder NIA arrests another accused in Bengaluru posing as plumber. The National Investigation Agency (NIA) has arrested a wanted criminal, who was carrying a reward of Rs five lakh on his head in connection with the murder of Karnataka BJP Yuva Morcha leader Praveen Nettaru.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm