ಬ್ರೇಕಿಂಗ್ ನ್ಯೂಸ್
05-03-23 01:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ನಗರದ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಎನ್ಐಎ ಅಧಿಕಾರಿಗಳು ಆರೋಪಿ ತುಫೈಲ್ ಬಗ್ಗೆ ಸುಳಿವು ಕೊಟ್ಟವರಿಗೆ ರೂ. 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ಸುಮಾರು 10ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ತುಫೈಲ್ ಮನೆ ಬಳಿಗೆ ಹೋಗಿದ್ದಾರೆ. ಇಬ್ಬರು ಅಧಿಕಾರಿಗಳು ಫ್ಲಂಬರ್ ಕಾರ್ಮಿಕರ ಸೋಗಿನಲ್ಲಿ ಮನೆಯ ಒಳನುಗ್ಗಿದ್ದರು. ಈ ವೇಳೆ ತುಫೈಲ್ ಮನೆ ಒಳಗೆ ಮಟನ್ ಕತ್ತರಿಸುತ್ತಿರುವುದು ಕಂಡುಬಂದಿದೆ.

ಒಳಗೆ ಬಂದಿದ್ದ ಅಧಿಕಾರಿಗಳು ಆರೋಪಿ ತುಫೈಲ್ ಅನ್ನುವುದನ್ನು ದೃಢಪಡಿಸುತ್ತಿದ್ದಂತೆ ಮತ್ತಿಬ್ಬರು ಅಧಿಕಾರಿಗಳು ಒಳಗೆ ಬಂದಿದ್ದರು. ಇದನ್ನು ನೋಡಿದ ತುಫೈಲ್, ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದರ ಬೆನ್ನಲ್ಲೇ ಇತರೇ ಅಧಿಕಾರಿಗಳು ಏಕಕಾಲಕ್ಕೆ ಮನೆಗೆ ನುಗ್ಗಿದ್ದು ಆರೋಪಿಯನ್ನು ಲಾಕ್ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಐದು ಮಂದಿ ಪ್ರಮುಖ ಆರೋಪಿಗಳು ಎನ್ಐಎ ಅಧಿಕಾರಿಗಳ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಆ ಪೈಕಿ ಮಡಿಕೇರಿಯ ತುಫೈಲ್ ಹತ್ಯೆಗೈದ ನಾಲ್ವರು ಪರಾರಿಯಾಗಲು ಮತ್ತು ಅಡಗುತಾಣಕ್ಕೆ ಸಹಕಾರ ನೀಡಿದ್ದ ಎನ್ನಲಾಗಿದೆ.
Praveen Nettaru murder NIA arrests another accused in Bengaluru posing as plumber. The National Investigation Agency (NIA) has arrested a wanted criminal, who was carrying a reward of Rs five lakh on his head in connection with the murder of Karnataka BJP Yuva Morcha leader Praveen Nettaru.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm