ಬ್ರೇಕಿಂಗ್ ನ್ಯೂಸ್
06-03-23 04:47 pm HK News Desk ಕರ್ನಾಟಕ
ಕಲಬುರಗಿ, ಮಾ.6: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾದ ಘಟನೆ ಜೇವರ್ಗಿ ಪಟ್ಟಣದ ಹೆಲಿಪ್ಯಾಡ್ನಲ್ಲಿ ನಡೆದಿದೆ.
ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಜೇವರ್ಗಿ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬಂದ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಕಾಪ್ಟರ್ ಲ್ಯಾಂಡ್ ಆಗುವ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್ನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು.
ಹೆಲಿಪ್ಯಾಡ್ ಸುತ್ತ ಜಮೀನಿನನಲ್ಲಿ ಹಾಕಿದ್ದ ಪ್ಲಾಸ್ಟಿಕ್ ಚೀಲಗಳನ್ನು ತೆಗೆದು ಸ್ವಚ್ಛಗೊಳಿಸಿರಲಿಲ್ಲ. ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ತಿರುಗುವ ಗಾಳಿಗೆ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಕೂಡಲೇ ಎಚ್ಚತ್ತ ಪೈಲಟ್ ಹೆಲಿಕಾಪ್ಟರನ್ನು ಟೇಕ್ ಆಫ್ ಮಾಡಿದ್ದಾರೆ. ನಂತರ ಒಂದೆರಡು ಸುತ್ತು ಹೆಲಿಕಾಪ್ಟರ್ನ್ನು ಆಕಾಶದಲ್ಲಿ ಹಾರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ್ದಾರೆ. ಬಳಿಕ ಪೈಲಟ್ ಕಾಪ್ಟರ್ ಲ್ಯಾಂಡ್ ಮಾಡಿದ್ದಾರೆ. ಹೆಲಿಕ್ಯಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿ ಬಂದಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಕಕ್ಕಾಬಿಕ್ಕಿಯಾಗಿದ್ದಾರೆ.
ಪಿಡಬ್ಲ್ಯುಡಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಉಂಟಾಗಿತ್ತು. ತಾತ್ಕಾಲಿಕ ಹೆಲಿಪ್ಯಾಡ್ ಎಂದ ಮೇಲೆ ಅಲ್ಲಿನ ಸ್ವಚ್ಛತೆಗೂ ಆದ್ಯತೆ ನೀಡಬೇಕಿತ್ತು. ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಾಪ್ಟರ್ ಪೈಲಟ್, ಪ್ಲಾಸ್ಟಿಕ್ ಚೀಲಗಳು ಹಾರುತ್ತಿದ್ದರೆ ಆ ಜಾಗದಲ್ಲಿ ಕಾಪ್ಟರ್ ಇಳಿಸಬಾರದು ಎಂದೇ ನಮಗೆ ಸೂಚನೆಗಳಿವೆ. ಪೈಲಟ್ ಕಲಿಯುವಾಗಲೇ ಈ ನಿಯಮ ಹೇಳುತ್ತಾರೆ. ಇಲ್ಲಿ ಪ್ಲಾಸ್ಟಿಕ್ ಚೀಲ ಹಾರಿ ಪ್ರೊಪೆಲ್ಲರ್ ಮೇಲೆ ಕುಳಿತರೆ ಅಚಾತುರ್ಯ ಆಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
#WATCH | Kalaburagi | A helicopter, carrying former Karnataka CM and senior leader BS Yediyurappa, faced difficulty in landing after the helipad ground filled with plastic sheets and waste around. pic.twitter.com/BJTAMT1lpr
— ANI (@ANI) March 6, 2023
A helicopter carrying former Karnataka chief minister and senior BJP leader BS Yediyurappa faced difficulty in landing due to plastic sheets and waste on the helipad ground on Monday in Kalaburagi.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm