ಬ್ರೇಕಿಂಗ್ ನ್ಯೂಸ್
06-03-23 04:47 pm HK News Desk ಕರ್ನಾಟಕ
ಕಲಬುರಗಿ, ಮಾ.6: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾದ ಘಟನೆ ಜೇವರ್ಗಿ ಪಟ್ಟಣದ ಹೆಲಿಪ್ಯಾಡ್ನಲ್ಲಿ ನಡೆದಿದೆ.
ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಜೇವರ್ಗಿ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬಂದ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಕಾಪ್ಟರ್ ಲ್ಯಾಂಡ್ ಆಗುವ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್ನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು.
ಹೆಲಿಪ್ಯಾಡ್ ಸುತ್ತ ಜಮೀನಿನನಲ್ಲಿ ಹಾಕಿದ್ದ ಪ್ಲಾಸ್ಟಿಕ್ ಚೀಲಗಳನ್ನು ತೆಗೆದು ಸ್ವಚ್ಛಗೊಳಿಸಿರಲಿಲ್ಲ. ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ತಿರುಗುವ ಗಾಳಿಗೆ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಕೂಡಲೇ ಎಚ್ಚತ್ತ ಪೈಲಟ್ ಹೆಲಿಕಾಪ್ಟರನ್ನು ಟೇಕ್ ಆಫ್ ಮಾಡಿದ್ದಾರೆ. ನಂತರ ಒಂದೆರಡು ಸುತ್ತು ಹೆಲಿಕಾಪ್ಟರ್ನ್ನು ಆಕಾಶದಲ್ಲಿ ಹಾರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ್ದಾರೆ. ಬಳಿಕ ಪೈಲಟ್ ಕಾಪ್ಟರ್ ಲ್ಯಾಂಡ್ ಮಾಡಿದ್ದಾರೆ. ಹೆಲಿಕ್ಯಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿ ಬಂದಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಕಕ್ಕಾಬಿಕ್ಕಿಯಾಗಿದ್ದಾರೆ.
ಪಿಡಬ್ಲ್ಯುಡಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಉಂಟಾಗಿತ್ತು. ತಾತ್ಕಾಲಿಕ ಹೆಲಿಪ್ಯಾಡ್ ಎಂದ ಮೇಲೆ ಅಲ್ಲಿನ ಸ್ವಚ್ಛತೆಗೂ ಆದ್ಯತೆ ನೀಡಬೇಕಿತ್ತು. ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಾಪ್ಟರ್ ಪೈಲಟ್, ಪ್ಲಾಸ್ಟಿಕ್ ಚೀಲಗಳು ಹಾರುತ್ತಿದ್ದರೆ ಆ ಜಾಗದಲ್ಲಿ ಕಾಪ್ಟರ್ ಇಳಿಸಬಾರದು ಎಂದೇ ನಮಗೆ ಸೂಚನೆಗಳಿವೆ. ಪೈಲಟ್ ಕಲಿಯುವಾಗಲೇ ಈ ನಿಯಮ ಹೇಳುತ್ತಾರೆ. ಇಲ್ಲಿ ಪ್ಲಾಸ್ಟಿಕ್ ಚೀಲ ಹಾರಿ ಪ್ರೊಪೆಲ್ಲರ್ ಮೇಲೆ ಕುಳಿತರೆ ಅಚಾತುರ್ಯ ಆಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
#WATCH | Kalaburagi | A helicopter, carrying former Karnataka CM and senior leader BS Yediyurappa, faced difficulty in landing after the helipad ground filled with plastic sheets and waste around. pic.twitter.com/BJTAMT1lpr
— ANI (@ANI) March 6, 2023
A helicopter carrying former Karnataka chief minister and senior BJP leader BS Yediyurappa faced difficulty in landing due to plastic sheets and waste on the helipad ground on Monday in Kalaburagi.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 04:34 pm
HK News Staffer
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am