ಬ್ರೇಕಿಂಗ್ ನ್ಯೂಸ್
06-03-23 04:47 pm HK News Desk ಕರ್ನಾಟಕ
ಕಲಬುರಗಿ, ಮಾ.6: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾದ ಘಟನೆ ಜೇವರ್ಗಿ ಪಟ್ಟಣದ ಹೆಲಿಪ್ಯಾಡ್ನಲ್ಲಿ ನಡೆದಿದೆ.
ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಜೇವರ್ಗಿ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬಂದ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಕಾಪ್ಟರ್ ಲ್ಯಾಂಡ್ ಆಗುವ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್ನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು.
ಹೆಲಿಪ್ಯಾಡ್ ಸುತ್ತ ಜಮೀನಿನನಲ್ಲಿ ಹಾಕಿದ್ದ ಪ್ಲಾಸ್ಟಿಕ್ ಚೀಲಗಳನ್ನು ತೆಗೆದು ಸ್ವಚ್ಛಗೊಳಿಸಿರಲಿಲ್ಲ. ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ತಿರುಗುವ ಗಾಳಿಗೆ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಕೂಡಲೇ ಎಚ್ಚತ್ತ ಪೈಲಟ್ ಹೆಲಿಕಾಪ್ಟರನ್ನು ಟೇಕ್ ಆಫ್ ಮಾಡಿದ್ದಾರೆ. ನಂತರ ಒಂದೆರಡು ಸುತ್ತು ಹೆಲಿಕಾಪ್ಟರ್ನ್ನು ಆಕಾಶದಲ್ಲಿ ಹಾರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ್ದಾರೆ. ಬಳಿಕ ಪೈಲಟ್ ಕಾಪ್ಟರ್ ಲ್ಯಾಂಡ್ ಮಾಡಿದ್ದಾರೆ. ಹೆಲಿಕ್ಯಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿ ಬಂದಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಕಕ್ಕಾಬಿಕ್ಕಿಯಾಗಿದ್ದಾರೆ.
ಪಿಡಬ್ಲ್ಯುಡಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಉಂಟಾಗಿತ್ತು. ತಾತ್ಕಾಲಿಕ ಹೆಲಿಪ್ಯಾಡ್ ಎಂದ ಮೇಲೆ ಅಲ್ಲಿನ ಸ್ವಚ್ಛತೆಗೂ ಆದ್ಯತೆ ನೀಡಬೇಕಿತ್ತು. ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಾಪ್ಟರ್ ಪೈಲಟ್, ಪ್ಲಾಸ್ಟಿಕ್ ಚೀಲಗಳು ಹಾರುತ್ತಿದ್ದರೆ ಆ ಜಾಗದಲ್ಲಿ ಕಾಪ್ಟರ್ ಇಳಿಸಬಾರದು ಎಂದೇ ನಮಗೆ ಸೂಚನೆಗಳಿವೆ. ಪೈಲಟ್ ಕಲಿಯುವಾಗಲೇ ಈ ನಿಯಮ ಹೇಳುತ್ತಾರೆ. ಇಲ್ಲಿ ಪ್ಲಾಸ್ಟಿಕ್ ಚೀಲ ಹಾರಿ ಪ್ರೊಪೆಲ್ಲರ್ ಮೇಲೆ ಕುಳಿತರೆ ಅಚಾತುರ್ಯ ಆಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
#WATCH | Kalaburagi | A helicopter, carrying former Karnataka CM and senior leader BS Yediyurappa, faced difficulty in landing after the helipad ground filled with plastic sheets and waste around. pic.twitter.com/BJTAMT1lpr
— ANI (@ANI) March 6, 2023
A helicopter carrying former Karnataka chief minister and senior BJP leader BS Yediyurappa faced difficulty in landing due to plastic sheets and waste on the helipad ground on Monday in Kalaburagi.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm