ಬ್ರೇಕಿಂಗ್ ನ್ಯೂಸ್
06-03-23 04:47 pm HK News Desk ಕರ್ನಾಟಕ
ಕಲಬುರಗಿ, ಮಾ.6: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾದ ಘಟನೆ ಜೇವರ್ಗಿ ಪಟ್ಟಣದ ಹೆಲಿಪ್ಯಾಡ್ನಲ್ಲಿ ನಡೆದಿದೆ.
ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಜೇವರ್ಗಿ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬಂದ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಕಾಪ್ಟರ್ ಲ್ಯಾಂಡ್ ಆಗುವ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್ನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು.
ಹೆಲಿಪ್ಯಾಡ್ ಸುತ್ತ ಜಮೀನಿನನಲ್ಲಿ ಹಾಕಿದ್ದ ಪ್ಲಾಸ್ಟಿಕ್ ಚೀಲಗಳನ್ನು ತೆಗೆದು ಸ್ವಚ್ಛಗೊಳಿಸಿರಲಿಲ್ಲ. ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ತಿರುಗುವ ಗಾಳಿಗೆ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಕೂಡಲೇ ಎಚ್ಚತ್ತ ಪೈಲಟ್ ಹೆಲಿಕಾಪ್ಟರನ್ನು ಟೇಕ್ ಆಫ್ ಮಾಡಿದ್ದಾರೆ. ನಂತರ ಒಂದೆರಡು ಸುತ್ತು ಹೆಲಿಕಾಪ್ಟರ್ನ್ನು ಆಕಾಶದಲ್ಲಿ ಹಾರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ್ದಾರೆ. ಬಳಿಕ ಪೈಲಟ್ ಕಾಪ್ಟರ್ ಲ್ಯಾಂಡ್ ಮಾಡಿದ್ದಾರೆ. ಹೆಲಿಕ್ಯಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿ ಬಂದಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಕಕ್ಕಾಬಿಕ್ಕಿಯಾಗಿದ್ದಾರೆ.
ಪಿಡಬ್ಲ್ಯುಡಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಉಂಟಾಗಿತ್ತು. ತಾತ್ಕಾಲಿಕ ಹೆಲಿಪ್ಯಾಡ್ ಎಂದ ಮೇಲೆ ಅಲ್ಲಿನ ಸ್ವಚ್ಛತೆಗೂ ಆದ್ಯತೆ ನೀಡಬೇಕಿತ್ತು. ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಾಪ್ಟರ್ ಪೈಲಟ್, ಪ್ಲಾಸ್ಟಿಕ್ ಚೀಲಗಳು ಹಾರುತ್ತಿದ್ದರೆ ಆ ಜಾಗದಲ್ಲಿ ಕಾಪ್ಟರ್ ಇಳಿಸಬಾರದು ಎಂದೇ ನಮಗೆ ಸೂಚನೆಗಳಿವೆ. ಪೈಲಟ್ ಕಲಿಯುವಾಗಲೇ ಈ ನಿಯಮ ಹೇಳುತ್ತಾರೆ. ಇಲ್ಲಿ ಪ್ಲಾಸ್ಟಿಕ್ ಚೀಲ ಹಾರಿ ಪ್ರೊಪೆಲ್ಲರ್ ಮೇಲೆ ಕುಳಿತರೆ ಅಚಾತುರ್ಯ ಆಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
#WATCH | Kalaburagi | A helicopter, carrying former Karnataka CM and senior leader BS Yediyurappa, faced difficulty in landing after the helipad ground filled with plastic sheets and waste around. pic.twitter.com/BJTAMT1lpr
— ANI (@ANI) March 6, 2023
A helicopter carrying former Karnataka chief minister and senior BJP leader BS Yediyurappa faced difficulty in landing due to plastic sheets and waste on the helipad ground on Monday in Kalaburagi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm