ಬ್ರೇಕಿಂಗ್ ನ್ಯೂಸ್
06-03-23 04:47 pm HK News Desk ಕರ್ನಾಟಕ
ಕಲಬುರಗಿ, ಮಾ.6: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾದ ಘಟನೆ ಜೇವರ್ಗಿ ಪಟ್ಟಣದ ಹೆಲಿಪ್ಯಾಡ್ನಲ್ಲಿ ನಡೆದಿದೆ.
ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಜೇವರ್ಗಿ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬಂದ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಕಾಪ್ಟರ್ ಲ್ಯಾಂಡ್ ಆಗುವ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್ನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು.
ಹೆಲಿಪ್ಯಾಡ್ ಸುತ್ತ ಜಮೀನಿನನಲ್ಲಿ ಹಾಕಿದ್ದ ಪ್ಲಾಸ್ಟಿಕ್ ಚೀಲಗಳನ್ನು ತೆಗೆದು ಸ್ವಚ್ಛಗೊಳಿಸಿರಲಿಲ್ಲ. ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ತಿರುಗುವ ಗಾಳಿಗೆ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಕೂಡಲೇ ಎಚ್ಚತ್ತ ಪೈಲಟ್ ಹೆಲಿಕಾಪ್ಟರನ್ನು ಟೇಕ್ ಆಫ್ ಮಾಡಿದ್ದಾರೆ. ನಂತರ ಒಂದೆರಡು ಸುತ್ತು ಹೆಲಿಕಾಪ್ಟರ್ನ್ನು ಆಕಾಶದಲ್ಲಿ ಹಾರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ್ದಾರೆ. ಬಳಿಕ ಪೈಲಟ್ ಕಾಪ್ಟರ್ ಲ್ಯಾಂಡ್ ಮಾಡಿದ್ದಾರೆ. ಹೆಲಿಕ್ಯಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿ ಬಂದಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಕಕ್ಕಾಬಿಕ್ಕಿಯಾಗಿದ್ದಾರೆ.
ಪಿಡಬ್ಲ್ಯುಡಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಉಂಟಾಗಿತ್ತು. ತಾತ್ಕಾಲಿಕ ಹೆಲಿಪ್ಯಾಡ್ ಎಂದ ಮೇಲೆ ಅಲ್ಲಿನ ಸ್ವಚ್ಛತೆಗೂ ಆದ್ಯತೆ ನೀಡಬೇಕಿತ್ತು. ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಾಪ್ಟರ್ ಪೈಲಟ್, ಪ್ಲಾಸ್ಟಿಕ್ ಚೀಲಗಳು ಹಾರುತ್ತಿದ್ದರೆ ಆ ಜಾಗದಲ್ಲಿ ಕಾಪ್ಟರ್ ಇಳಿಸಬಾರದು ಎಂದೇ ನಮಗೆ ಸೂಚನೆಗಳಿವೆ. ಪೈಲಟ್ ಕಲಿಯುವಾಗಲೇ ಈ ನಿಯಮ ಹೇಳುತ್ತಾರೆ. ಇಲ್ಲಿ ಪ್ಲಾಸ್ಟಿಕ್ ಚೀಲ ಹಾರಿ ಪ್ರೊಪೆಲ್ಲರ್ ಮೇಲೆ ಕುಳಿತರೆ ಅಚಾತುರ್ಯ ಆಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
#WATCH | Kalaburagi | A helicopter, carrying former Karnataka CM and senior leader BS Yediyurappa, faced difficulty in landing after the helipad ground filled with plastic sheets and waste around. pic.twitter.com/BJTAMT1lpr
— ANI (@ANI) March 6, 2023
A helicopter carrying former Karnataka chief minister and senior BJP leader BS Yediyurappa faced difficulty in landing due to plastic sheets and waste on the helipad ground on Monday in Kalaburagi.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm