ಬ್ರೇಕಿಂಗ್ ನ್ಯೂಸ್
06-03-23 07:57 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾಫೀ - ತಿಂಡಿ - ಬಿಸ್ಕೆಟ್ ಗಳ ಹೆಸರಿನಲ್ಲಿ 200 ಕೋಟಿ ಲೂಟಿ ಮಾಡಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷರು ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರು ರಮೇಶ್ ಎನ್. ಆರ್ ಪತ್ರಿಕಾ ಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದಾರೆ.
ಸಿದ್ಧರಾಮಯ್ಯ ಮತ್ತು ಅವರ ಕಚೇರಿಯ ಸಿಬ್ಬಂದಿವರ್ಗ ಹಾಗೂ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಯ ಅಂದಿನ ಅಧಿಕಾರಿಗಳು ಭಾಗಿಗಳಾಗಿ ನಡೆಸಿರುವ ಬೃಹತ್ ಹಗರಣ ಇದಾಗಿದ್ದು, 2013-14 ರಿಂದ 2017-18 ರವರೆಗಿನ 5 ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಸಭೆಗಳು ಮತ್ತು ಮುಖ್ಯಮಂತ್ರಿಗಳ ಕಚೇರಿಗೆ ವಿವಿಧ ಕಾರ್ಯಗಳ ಪ್ರಯುಕ್ತ ಹೊರಗಿನಿಂದ ಬರುವಂತಹ ಅತಿಥಿಗಳ ಉಪಚಾರ ಕಾರ್ಯಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಕರ್ನಾಟಕ ಸರ್ಕಾರದ “ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ” ಹಾಗೂ “ರಾಜ್ಯ ಅತಿಥಿ ಗೃಹಗಳ ವಿಭಾಗ”ದ ಅಧಿಕಾರಿಗಳು RTI ಕಾಯ್ದೆಯಡಿಯಲ್ಲಿ ನೀಡಿರುವ ಅಧಿಕೃತ ದಾಖಲೆಗಳಿಂದ ಈ ಮಾಹಿತಿಯನ್ನು ಅವರು ಬಹಿರಂಗಗೊಳಿಸಿದರು.
5 ವರ್ಷಗಳಲ್ಲಿನ 410 ರಜಾ ದಿನಗಳನ್ನೂ ಸೇರಿಸಿಕೊಂಡರೆ ದಿನಕ್ಕೆ ಸರಾಸರಿ 11 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. ಅಧಿಕಾರಿಗಳು ನಕಲಿ ದಾಖಲೆಗಳ ರಾಶಿಯನ್ನೇ ತಯಾರಿಸಿ ನಂಬಲಸಾಧ್ಯವಾದಂತಹ ಲೆಕ್ಕವನ್ನು ನೀಡಿದ್ದಾರೆಂಬ ಆರೋಪ ಮಾಡಿದ್ದಾರೆ.
RTI reveals CM Siddaramaiah spent 200 crores for tea coffee and biscuits, alleges BJP Ramesh. During the five Year tenure of Siddaramaiah as CM it is alleged he was spending 11 lakhs per day just for coffee tea and biscuits.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm