ಬ್ರೇಕಿಂಗ್ ನ್ಯೂಸ್
06-03-23 07:57 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾಫೀ - ತಿಂಡಿ - ಬಿಸ್ಕೆಟ್ ಗಳ ಹೆಸರಿನಲ್ಲಿ 200 ಕೋಟಿ ಲೂಟಿ ಮಾಡಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷರು ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರು ರಮೇಶ್ ಎನ್. ಆರ್ ಪತ್ರಿಕಾ ಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದಾರೆ.
ಸಿದ್ಧರಾಮಯ್ಯ ಮತ್ತು ಅವರ ಕಚೇರಿಯ ಸಿಬ್ಬಂದಿವರ್ಗ ಹಾಗೂ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಯ ಅಂದಿನ ಅಧಿಕಾರಿಗಳು ಭಾಗಿಗಳಾಗಿ ನಡೆಸಿರುವ ಬೃಹತ್ ಹಗರಣ ಇದಾಗಿದ್ದು, 2013-14 ರಿಂದ 2017-18 ರವರೆಗಿನ 5 ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಸಭೆಗಳು ಮತ್ತು ಮುಖ್ಯಮಂತ್ರಿಗಳ ಕಚೇರಿಗೆ ವಿವಿಧ ಕಾರ್ಯಗಳ ಪ್ರಯುಕ್ತ ಹೊರಗಿನಿಂದ ಬರುವಂತಹ ಅತಿಥಿಗಳ ಉಪಚಾರ ಕಾರ್ಯಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಕರ್ನಾಟಕ ಸರ್ಕಾರದ “ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ” ಹಾಗೂ “ರಾಜ್ಯ ಅತಿಥಿ ಗೃಹಗಳ ವಿಭಾಗ”ದ ಅಧಿಕಾರಿಗಳು RTI ಕಾಯ್ದೆಯಡಿಯಲ್ಲಿ ನೀಡಿರುವ ಅಧಿಕೃತ ದಾಖಲೆಗಳಿಂದ ಈ ಮಾಹಿತಿಯನ್ನು ಅವರು ಬಹಿರಂಗಗೊಳಿಸಿದರು.
5 ವರ್ಷಗಳಲ್ಲಿನ 410 ರಜಾ ದಿನಗಳನ್ನೂ ಸೇರಿಸಿಕೊಂಡರೆ ದಿನಕ್ಕೆ ಸರಾಸರಿ 11 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. ಅಧಿಕಾರಿಗಳು ನಕಲಿ ದಾಖಲೆಗಳ ರಾಶಿಯನ್ನೇ ತಯಾರಿಸಿ ನಂಬಲಸಾಧ್ಯವಾದಂತಹ ಲೆಕ್ಕವನ್ನು ನೀಡಿದ್ದಾರೆಂಬ ಆರೋಪ ಮಾಡಿದ್ದಾರೆ.
RTI reveals CM Siddaramaiah spent 200 crores for tea coffee and biscuits, alleges BJP Ramesh. During the five Year tenure of Siddaramaiah as CM it is alleged he was spending 11 lakhs per day just for coffee tea and biscuits.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm