ಬ್ರೇಕಿಂಗ್ ನ್ಯೂಸ್
06-03-23 07:57 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾಫೀ - ತಿಂಡಿ - ಬಿಸ್ಕೆಟ್ ಗಳ ಹೆಸರಿನಲ್ಲಿ 200 ಕೋಟಿ ಲೂಟಿ ಮಾಡಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷರು ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರು ರಮೇಶ್ ಎನ್. ಆರ್ ಪತ್ರಿಕಾ ಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದಾರೆ.
ಸಿದ್ಧರಾಮಯ್ಯ ಮತ್ತು ಅವರ ಕಚೇರಿಯ ಸಿಬ್ಬಂದಿವರ್ಗ ಹಾಗೂ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಯ ಅಂದಿನ ಅಧಿಕಾರಿಗಳು ಭಾಗಿಗಳಾಗಿ ನಡೆಸಿರುವ ಬೃಹತ್ ಹಗರಣ ಇದಾಗಿದ್ದು, 2013-14 ರಿಂದ 2017-18 ರವರೆಗಿನ 5 ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಸಭೆಗಳು ಮತ್ತು ಮುಖ್ಯಮಂತ್ರಿಗಳ ಕಚೇರಿಗೆ ವಿವಿಧ ಕಾರ್ಯಗಳ ಪ್ರಯುಕ್ತ ಹೊರಗಿನಿಂದ ಬರುವಂತಹ ಅತಿಥಿಗಳ ಉಪಚಾರ ಕಾರ್ಯಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಕರ್ನಾಟಕ ಸರ್ಕಾರದ “ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ” ಹಾಗೂ “ರಾಜ್ಯ ಅತಿಥಿ ಗೃಹಗಳ ವಿಭಾಗ”ದ ಅಧಿಕಾರಿಗಳು RTI ಕಾಯ್ದೆಯಡಿಯಲ್ಲಿ ನೀಡಿರುವ ಅಧಿಕೃತ ದಾಖಲೆಗಳಿಂದ ಈ ಮಾಹಿತಿಯನ್ನು ಅವರು ಬಹಿರಂಗಗೊಳಿಸಿದರು.
5 ವರ್ಷಗಳಲ್ಲಿನ 410 ರಜಾ ದಿನಗಳನ್ನೂ ಸೇರಿಸಿಕೊಂಡರೆ ದಿನಕ್ಕೆ ಸರಾಸರಿ 11 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. ಅಧಿಕಾರಿಗಳು ನಕಲಿ ದಾಖಲೆಗಳ ರಾಶಿಯನ್ನೇ ತಯಾರಿಸಿ ನಂಬಲಸಾಧ್ಯವಾದಂತಹ ಲೆಕ್ಕವನ್ನು ನೀಡಿದ್ದಾರೆಂಬ ಆರೋಪ ಮಾಡಿದ್ದಾರೆ.
RTI reveals CM Siddaramaiah spent 200 crores for tea coffee and biscuits, alleges BJP Ramesh. During the five Year tenure of Siddaramaiah as CM it is alleged he was spending 11 lakhs per day just for coffee tea and biscuits.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm