ಬ್ರೇಕಿಂಗ್ ನ್ಯೂಸ್
06-03-23 07:57 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾಫೀ - ತಿಂಡಿ - ಬಿಸ್ಕೆಟ್ ಗಳ ಹೆಸರಿನಲ್ಲಿ 200 ಕೋಟಿ ಲೂಟಿ ಮಾಡಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷರು ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರು ರಮೇಶ್ ಎನ್. ಆರ್ ಪತ್ರಿಕಾ ಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದಾರೆ.
ಸಿದ್ಧರಾಮಯ್ಯ ಮತ್ತು ಅವರ ಕಚೇರಿಯ ಸಿಬ್ಬಂದಿವರ್ಗ ಹಾಗೂ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಯ ಅಂದಿನ ಅಧಿಕಾರಿಗಳು ಭಾಗಿಗಳಾಗಿ ನಡೆಸಿರುವ ಬೃಹತ್ ಹಗರಣ ಇದಾಗಿದ್ದು, 2013-14 ರಿಂದ 2017-18 ರವರೆಗಿನ 5 ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಸಭೆಗಳು ಮತ್ತು ಮುಖ್ಯಮಂತ್ರಿಗಳ ಕಚೇರಿಗೆ ವಿವಿಧ ಕಾರ್ಯಗಳ ಪ್ರಯುಕ್ತ ಹೊರಗಿನಿಂದ ಬರುವಂತಹ ಅತಿಥಿಗಳ ಉಪಚಾರ ಕಾರ್ಯಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಕರ್ನಾಟಕ ಸರ್ಕಾರದ “ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ” ಹಾಗೂ “ರಾಜ್ಯ ಅತಿಥಿ ಗೃಹಗಳ ವಿಭಾಗ”ದ ಅಧಿಕಾರಿಗಳು RTI ಕಾಯ್ದೆಯಡಿಯಲ್ಲಿ ನೀಡಿರುವ ಅಧಿಕೃತ ದಾಖಲೆಗಳಿಂದ ಈ ಮಾಹಿತಿಯನ್ನು ಅವರು ಬಹಿರಂಗಗೊಳಿಸಿದರು.
5 ವರ್ಷಗಳಲ್ಲಿನ 410 ರಜಾ ದಿನಗಳನ್ನೂ ಸೇರಿಸಿಕೊಂಡರೆ ದಿನಕ್ಕೆ ಸರಾಸರಿ 11 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. ಅಧಿಕಾರಿಗಳು ನಕಲಿ ದಾಖಲೆಗಳ ರಾಶಿಯನ್ನೇ ತಯಾರಿಸಿ ನಂಬಲಸಾಧ್ಯವಾದಂತಹ ಲೆಕ್ಕವನ್ನು ನೀಡಿದ್ದಾರೆಂಬ ಆರೋಪ ಮಾಡಿದ್ದಾರೆ.
RTI reveals CM Siddaramaiah spent 200 crores for tea coffee and biscuits, alleges BJP Ramesh. During the five Year tenure of Siddaramaiah as CM it is alleged he was spending 11 lakhs per day just for coffee tea and biscuits.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm