ಕುಕ್ಕರ್ ಬಾಂಬ್ ಆರೋಪಿ ಆಸ್ಪತ್ರೆಯಿಂದ ಬಿಡುಗಡೆ ; ಹತ್ತು ದಿನ ಕಸ್ಟಡಿಗೆ ಪಡೆದ ಎನ್ಐಎ 

06-03-23 08:26 pm       Bangalore Correspondent   ಕರ್ನಾಟಕ

ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಕ್ ನನ್ನು ಹತ್ತು ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ತಮ್ಮ ಕಸ್ಟಡಿಗೆ ಪಡೆದಿದ್ದಾರೆ. 

ಬೆಂಗಳೂರು, ಮಾ.6 : ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಕ್ ನನ್ನು ಹತ್ತು ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ತಮ್ಮ ಕಸ್ಟಡಿಗೆ ಪಡೆದಿದ್ದಾರೆ. 

ಕುಕ್ಕರ್ ಸ್ಫೋಟದಲ್ಲಿ ಗಂಭೀರ ಸುಟ್ಟ ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ನನ್ನು ಮೊದಲಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು ಪೊಲೀಸ್ ಭದ್ರತೆಯಲ್ಲಿ ಎರಡೂವರೆ ತಿಂಗಳ ಚಿಕಿತ್ಸೆ ಬಳಿಕ ಶಾರೀಕ್ ಮಾ.5ರಂದು ಬಿಡುಗಡೆಯಾಗಿದ್ದಾನೆ. 

ಈ ಹಿನ್ನೆಲೆಯಲ್ಲಿ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ಎನ್ಐಎ ಕೋರ್ಟ್ ಮುಂದೆ ಹಾಜರುಪಡಿಸಿದ್ದು 10 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದೆ. ಮಾ.5ರಂದು ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಕೃತ್ಯವನ್ನು ನಾವೇ ಮಾಡಿದ್ದಾಗಿ ಐಸಿಸ್ ಹೇಳಿಕೊಂಡಿತ್ತು. ಇದೇ ವೇಳೆ, ಪ್ರಕರಣದ ಆರೋಪಿಯನ್ನು ಎನ್ಐಎ ಕಸ್ಟಡಿಗೆ ಪಡೆದು ತನಿಖೆ ಆರಂಭಿಸಿದೆ.‌ 

2022ರ ನವೆಂಬರ್ 19ರಂದು ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಶಾರೀಕ್ ಪ್ರಯಾಣಿಸುತ್ತಿದ್ದಾಗ ಕುಕ್ಕರ್ ಬಾಂಬ್ ಸ್ಫೋಟಗೊಂಡ ಘಟನೆ ನಡೆದಿತ್ತು. ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಕೂಡ ತೀವ್ರ ಗಾಯಗೊಂಡಿದ್ದರು.

In a major development, suspected terrorist H. Mohammad Shariq, who suffered severe burn injuries during the explosion of the cooker blast in Mangaluru, was discharged from Victoria Hospital in Bengaluru, sources confirmed on Monday.