ಬ್ರೇಕಿಂಗ್ ನ್ಯೂಸ್
07-03-23 12:37 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6 : ಬೇಸಿಗೆ ಇನ್ನೂ ಪ್ರಖರವಾಗುವ ಮುನ್ನವೇ ರಾಜ್ಯ ಹಾಗೂ ರಾಜ್ಯಧಾನಿಯಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಬಿಸಿಗಾಳಿಯ ಅಲೆಗಳು ಕಂಡುಬಂದಿವೆ.
ಹೀಗಾಗಿ ಆರೋಗ್ಯದ ಬಗ್ಗೆ ಎಲ್ಲರೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಅಧಿಕ ಉಷ್ಣಾಂಶದಿಂದ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆ ಇದೆ. ಅದರಲ್ಲೂ ವೃದ್ಧರು, ಮಕ್ಕಳು, ದುರ್ಬಲ ಆರೋಗ್ಯವುಳ್ಳವರು ಇನ್ನಷ್ಟು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಹಲವು ಸಲಹೆಗಳನ್ನು ನೀಡಿ ಸುತ್ತೋಲೆ ಹೊರಡಿಸಿದೆ.
ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ಬೇಸಿಗೆಯ ಧಗೆ ಉಲ್ಬಣಿಸಿದೆ. ಉಷ್ಣಾಂಶವು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇಲ್ಲಿ ಮುಂದಿನ 48 ಗಂಟೆಗಳಲ್ಲಿ ಮೇಲ್ಮೈ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಮುನ್ನೆಚ್ಚರಿಕೆಗಳನ್ನು ಪಾಲಿಸಿ:
ಬಾಯಾರಿಕೆ ಇಲ್ಲದಿದ್ದರೂ ಪದೇ ಪದೆ ನೀರು ಕುಡಿಯಬೇಕು. ಪ್ರಯಾಣ ಸಮಯದಲ್ಲೂ ನೀರು ತೆಗೆದುಕೊಂಡು ಹೋಗಬೇಕು.ದೇಹವು ನಿರ್ಜಲೀಕರಣಗೊಳ್ಳಲು ಬಿಡಬಾರದು.
ರಾಜ್ಯದಲ್ಲಿ ಬಿಸಿಲು ಬೇಗೆ ಹೆಚ್ಚುತ್ತಿದ್ದಂತೆ ಋುತುಮಾನದ ಕಾಯಿಲೆಗಳಾದ ಕಾಲರಾ, ವಿಷಮಶೀತ ಜ್ವರ, ಕಣ್ಣಿನ ತೊಂದರೆ, ವೈರಲ್ ಸೋಂಕು, ನಿರ್ಜಲೀಕರಣ, ಹೊಟ್ಟೆ ನೋವು, ಡೆಂಗೆ, ಚಿಕನ್ ಫಾಕ್ಸ್, ಬಿಸಿನಿಲಿಂದ ತಲೆ ಸುತ್ತು, ಮೂಗಿನಲ್ಲಿ ರಕ್ತ ಸುರಿಯುವುದು, ಅತಿಯಾದ ಸೂರ್ಯಕಿರಣಗಳಿಂದ ಚರ್ಮ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತಿವೆ. ಈ ಹಿನ್ನೆಲೆಯಲ್ಲಿ ರೋಗ ನಿಯಂತ್ರಣಕ್ಕೆ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಕ್ಲಿನಿಕಲ್ ಮತ್ತು ಎನರ್ಜಿ ಆಡಿಟಿಂಗ್ ಮಾಡಲು ರಾಜ್ಯ ತಾಂತ್ರಿಕ ಸಲಹಾ ಸಮಿತಿಯು (ಟಿಎಸಿ) ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದೆ.
ಕರಾವಳಿಯಲ್ಲಿ ಮಳೆ ಸಾಧ್ಯತೆ:
ಕರಾವಳಿಯಲ್ಲಿ ಮಳೆ ಬರುವ ಸಾಧ್ಯತೆ ಕೂಡ ಜಾಸ್ತಿಯಾಗಿದೆ. ಈಗಾಗಲೇ ಗುಜರಾತ್ನಲ್ಲಿ ಮಳೆಯ ಸೂಚನೆ ನೀಡಲಾಗಿದೆ. ಭಾನುವಾರದಿಂದ ಮಹಾರಾಷ್ಟ್ರದಲ್ಲೂ ಮಳೆ ನಿರೀಕ್ಷೆಯನ್ನು ಐಎಂಡಿ ನೀಡಿದೆ. ಈ ಎರಡು ರಾಜ್ಯಗಳಲ್ಲಿ ಮಳೆಯಾದರೆ ನಂತರ ನಿಧಾನವಾಗಿ ಇದರ ಪರಿಣಾಮದಿಂದ ಕರಾವಳಿ ಭಾಗದಲ್ಲೂ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
Rising temperature in karnataka and coastal regions, viral infections spread, safety alert by weather department.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm