ಬ್ರೇಕಿಂಗ್ ನ್ಯೂಸ್
08-03-23 11:49 am HK News Desk ಕರ್ನಾಟಕ
ದಾವಣಗೆರೆ, ಮಾ.8: ನನ್ನ ಮಗ ಕಚೇರಿಯಲ್ಲಿ ಸುಮ್ಮನೆ ಕುಳಿತಿದ್ದ, ಯಾರೂ ಇಬ್ಬರು ನಮ್ಮ ಕಚೇರಿಗೆ ಬಂದು ಹಣ ಇಟ್ಟು ಓಡಿ ಹೋಗಿದ್ದಾರೆ. ನಮ್ಮ ಮೇಲೆ ಷಡ್ಯಂತ್ರ ನಡೆದಿದೆ ಎಂದು ಭ್ರಷ್ಟಾಚಾರ ಆರೋಪ ಹೊತ್ತಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಣ್ಣೀರು ಹಾಕಿದ್ದಾರೆ.
ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ಮಂಗಳವಾರ ಮಾತನಾಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, "ಯಾರೋ ಇಬ್ಬರು ನಮ್ಮ ಕಚೇರಿಗೆ ಹಣ ತಂದಿಟ್ಟು ಓಡಿ ಹೋದರು. ಆನಂತರ ನನ್ನ ಮಗನ ಕೈಯಲ್ಲಿ ಹಣದ ಇಟ್ಟು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದರು. ನನ್ನ ಮಗ ಪ್ರಶಾಂತ್ ಸುಮ್ಮನೆ ಕುಳಿತಿದ್ದನು. ಯಾರೋ ನಮ್ಮ ಕುಟುಂಬದ ಮೇಲೆ ಷಡ್ಯಂತ್ರ ನಡೆಸಿ ಲೋಕಾಯುಕ್ತ ದಾಳಿಗೆ ಸಿಲುಕಿಸಿದ್ದಾರೆ'' ಎಂದು ಆರೋಪಿಸಿದ್ದಾರೆ.

ನಮ್ಮ ಮನೆಯಲ್ಲಿ ಸಿಕ್ಕಿರುವ ಹಣಕ್ಕೆ ದಾಖಲೆ ಇದೆ ;
ಅಡಕೆ ಬೆಳೆಗಾರರ ಮನೆಯಲ್ಲಿ ಕನಿಷ್ಠ 5-6 ಕೋಟಿ ರೂ. ಹಣ ಇರುತ್ತದೆ. ಚನ್ನಗಿರಿ ತಾಲೂಕು ಅಡಕೆ ನಾಡು, ಎಲ್ಲರ ಮನೆಯಲ್ಲೂ ಹಣವಿರುತ್ತದೆ. ನಮ್ಮ ಕುಟುಂಬಕ್ಕೆ ಸೇರಿದ 125 ಎಕರೆ ಅಡಕೆ ತೋಟವಿದೆ. 2 ಕ್ರಷರ್ ಇದೆ, ಅಡಕೆ ಮಂಡಿಯಿದೆ. ಬೆಂಗಳೂರಿನ ಮನೆಗಳಲ್ಲಿ ಸಿಕ್ಕಿರುವ ಹಣ ನಮ್ಮ ಕುಟುಂಬದ್ದು. ಅದಕ್ಕೆಲ್ಲ ದಾಖಲೆ ಇದೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ನಾನು ತಪ್ಪು ಮಾಡಿಲ್ಲ ;
ಆಡಳಿತ ಪಕ್ಷದ ಶಾಸಕನ ಮನೆ ಮೇಲೆ ದಾಳಿ ಇತಿಹಾಸದಲ್ಲೇ ಮೊದಲು. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ವ್ಯಕ್ತಿತ್ವದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಗೊತ್ತಿದೆ ಎಂದು ಹೇಳಿದ್ದಾರೆ.
Karnataka BJP MLA Madal Virupakshappa busts out in tears, says its a plot.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm