ಬ್ರೇಕಿಂಗ್ ನ್ಯೂಸ್
08-03-23 02:18 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ.8 : ಚಾರ್ಮಾಡಿ ಘಾಟಿ ಆಸುಪಾಸಿನ ಕಾಡಿನಲ್ಲಿ ಬೆಂಕಿ ಬಿದ್ದು ಮೂರು ದಿನಗಳಿಂದ ನಿರಂತರ ಉರಿಯುತ್ತಿದೆ. ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದರೂ ನಿಯಂತ್ರಣಕ್ಕೆ ಬಂದಿಲ್ಲ. ಇದರಿಂದಾಗಿ ಬೆಂಕಿಯ ಜ್ವಾಲೆಗೆ ನೂರಾರು ಪಕ್ಷಿ, ಪ್ರಾಣಿಗಳು ಆಹುತಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ನಿರಂತರ ಬೆಂಕಿ ಉರಿಯತೊಡಗಿದ್ದು ಆಸುಪಾಸಿನ ನಿವಾಸಿಗಳು ಭೀತಿಗೆ ಒಳಗಾಗಿದ್ದಾರೆ. ಬೆಂಕಿಯಿಂದ ಜೀವ ಉಳಿಸಿಕೊಳ್ಳಲು ಕಾಡಿನಲ್ಲಿರುವ ಪ್ರಾಣಿಗಳು, ಘಟ ಸರ್ಪಗಳು ಹೊರಕ್ಕೆ ಬರುತ್ತಿವೆ. ಕಾಡಂಚಿನ ಗ್ರಾಮ ತರುವೆಯಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಹೊರಗೆ ಬಂದಿದ್ದು ಸೆರೆಯಾಗಿದೆ.


ದೈತ್ಯಾಕಾರದ ಕಾಳಿಂಗನನ್ನ ನೋಡಿ ಗ್ರಾಮಸ್ಥರು ಭೀತಿಗೆ ಒಳಗಾಗಿದ್ದಾರೆ. ಹಾವಾಡಿಗ ಆರೀಫ್ ಎಂಬವರು ಕಾಳಿಂಗನನ್ನು ಹಿಡಿದಿದ್ದು ಆತ ಸೆರೆಹಿಡಿದು ಎತ್ತಲಾಗದಷ್ಟು ದೈತ್ಯಾಕಾರವಾಗಿತ್ತು. ಬೃಹತ್ ಕಾಳಿಂಗ ಸರ್ಪವನ್ನು ಬಳಿಕ ಚಾರ್ಮಾಡಿ ಘಾಟಿಯ ಬೆಂಕಿ ಬೀಳದ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.

ಭಾರೀ ಬಿಸಿಲಿನ ಕಾರಣದಿಂದ ನಿರಂತರ ಬೆಂಕಿ ಬೀಳುತ್ತಿದ್ದು ದೂರ ದೂರಕ್ಕೆ ಪಸರಿಸುತ್ತಿದೆ. ಕಾಡಂಚಿನಲ್ಲಿ ಇರುವ ಗ್ರಾಮಸ್ಥರು ಎಸ್ಟೇಟ್ ಮಾಫಿಯಾದ ಹುನ್ನಾರದಲ್ಲಿ ಕಾಡಿಗೆ ಬೆಂಕಿ ಹಚ್ಚುತ್ತಿದ್ದಾರೆಂಬ ಶಂಕೆಯಿದೆ. ಅರಣ್ಯ ಇಲಾಖೆಯ ಸಿಬಂದಿ ಚಾರ್ಮಾಡಿಯಲ್ಲಿ ಬೆಂಕಿ ಹಾಕಿರುವ ಒಬ್ಬನನ್ನು ಬಂಧಿಸಿದ್ದಾರೆ.


ಇದೇ ವೇಳೆ, ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಸವನಕೋಟೆ ಮೀಸಲು ಅರಣ್ಯಕ್ಕೆ ಬೆಂಕಿ ಹಾಕಿದ ಓರ್ವನನ್ನು ಅರಣ್ಯ ಸಿಬಂದಿ ಬಂಧಿಸಿದ್ದಾರೆ. ರಘು ಎಂಬಾತನನ್ನು ಬಂಧಿಸಿದ್ದು ಕುಮಾರ್ ಹಾಗೂ ವೆಂಕಟೇಶ್ ಪರಾರಿಯಾಗಿದ್ದಾರೆ. ಮೀಸಲು ಅರಣ್ಯ ಸೇರಿ ಅಕ್ಕಪಕ್ಕದ ತೋಟಗಳಿಗೂ ಬೆಂಕಿ ಆವರಿಸಿದ್ದರಿಂದ ನೂರಾರು ಎಕರೆ ಅರಣ್ಯ , ತೋಟ ಬೆಂಕಿಗಾಹುತಿಯಾಗಿತ್ತು.
Mangalore Charmadi Ghat fire, hundreds of animals and birds found dead, snakes captured by villagers. A forest fire is raging in the highlands of Alekan, and a huge amount of forest, animals and birds have been burnt due to the fire started by miscreants. Fire spewed out of transformer, Kichi Natana in Halenerenki Shivaru Sanctuary: Hundreds of acres of forest destroyed Forest officials rushed to the spot on getting the information and tried to put out the fire with the help of locals. Due to the high altitude, the fire fighting vehicle could not go.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm