ಬ್ರೇಕಿಂಗ್ ನ್ಯೂಸ್
08-03-23 03:22 pm HK News Desk ಕರ್ನಾಟಕ
ಶಿವಮೊಗ್ಗ, ಮಾ.8 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಮತ್ತು ಪೊಲೀಸರು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಮತ್ತು ಶಿವಮೊಗ್ಗ ಆಸುಪಾಸಿನಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ಮಾಡಿದ್ದ ಪ್ರಕರಣದಲ್ಲಿಯೂ ಶಾರೀಕ್ ಆರೋಪಿಯಾಗಿದ್ದು ಆ ಹಿನ್ನೆಲೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖನಾಗಿದ್ದಾನೆ. ಎರಡು ದಿನಗಳ ಹಿಂದೆ ಆತನನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರೀಕ್ ನಿವಾಸದ ಬಳಿ ಒಯ್ದು ತನಿಖೆ ನಡೆಸಿದ್ದಾರೆ. ಈ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರು ನಡೆಸಿದ್ದಾರೆ. ಶಾರೀಕ್, ಮಾಝ್ ಮುನೀರ್, ಸಯ್ಯದ್ ಯಾಸೀನ್ ಸೇರಿಕೊಂಡು ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಮಾಡಿರುವುದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಯಲಾಗಿತ್ತು. ಮಾಝ್, ಯಾಸಿನ್ ಪೊಲೀಸರ ಬಲೆಗೆ ಬಿದ್ದಿದ್ದರೆ, ಶಾರೀಕ್ ತಲೆಮರೆಸಿಕೊಂಡಿದ್ದ. ಆನಂತರ ಮೈಸೂರಿನಲ್ಲಿ ಹೆಸರು ಬದಲಿಸಿ ಅಡಗಿಕೊಂಡಿದ್ದ. ಅಲ್ಲಿಂದಲೇ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಹಿಡಿದು ತಂದಿದ್ದಾಗ ಬ್ಲಾಸ್ಟ್ ಆಗಿತ್ತು. ಹಾಗಾಗಿ ಬಾಂಬ್ ಟ್ರಯಲ್ ಮಾಡಿದ್ದ ಜಾಗಕ್ಕೆ ಶಾರೀಕ್ ನನ್ನು ಶಿವಮೊಗ್ಗ ಪೊಲೀಸರು ಕರೆದೊಯ್ದು ತನಿಖೆ ನಡೆಸಿದ್ದಾರೆ.
Cooker blast case, NIA officers take Bomber Mohammed Shariq to Shivamogga for spot Mahazar.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 05:12 pm
Mangalore Correspondent
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm