ಬ್ರೇಕಿಂಗ್ ನ್ಯೂಸ್
08-03-23 03:22 pm HK News Desk ಕರ್ನಾಟಕ
ಶಿವಮೊಗ್ಗ, ಮಾ.8 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಮತ್ತು ಪೊಲೀಸರು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಮತ್ತು ಶಿವಮೊಗ್ಗ ಆಸುಪಾಸಿನಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ಮಾಡಿದ್ದ ಪ್ರಕರಣದಲ್ಲಿಯೂ ಶಾರೀಕ್ ಆರೋಪಿಯಾಗಿದ್ದು ಆ ಹಿನ್ನೆಲೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖನಾಗಿದ್ದಾನೆ. ಎರಡು ದಿನಗಳ ಹಿಂದೆ ಆತನನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರೀಕ್ ನಿವಾಸದ ಬಳಿ ಒಯ್ದು ತನಿಖೆ ನಡೆಸಿದ್ದಾರೆ. ಈ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರು ನಡೆಸಿದ್ದಾರೆ. ಶಾರೀಕ್, ಮಾಝ್ ಮುನೀರ್, ಸಯ್ಯದ್ ಯಾಸೀನ್ ಸೇರಿಕೊಂಡು ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಮಾಡಿರುವುದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಯಲಾಗಿತ್ತು. ಮಾಝ್, ಯಾಸಿನ್ ಪೊಲೀಸರ ಬಲೆಗೆ ಬಿದ್ದಿದ್ದರೆ, ಶಾರೀಕ್ ತಲೆಮರೆಸಿಕೊಂಡಿದ್ದ. ಆನಂತರ ಮೈಸೂರಿನಲ್ಲಿ ಹೆಸರು ಬದಲಿಸಿ ಅಡಗಿಕೊಂಡಿದ್ದ. ಅಲ್ಲಿಂದಲೇ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಹಿಡಿದು ತಂದಿದ್ದಾಗ ಬ್ಲಾಸ್ಟ್ ಆಗಿತ್ತು. ಹಾಗಾಗಿ ಬಾಂಬ್ ಟ್ರಯಲ್ ಮಾಡಿದ್ದ ಜಾಗಕ್ಕೆ ಶಾರೀಕ್ ನನ್ನು ಶಿವಮೊಗ್ಗ ಪೊಲೀಸರು ಕರೆದೊಯ್ದು ತನಿಖೆ ನಡೆಸಿದ್ದಾರೆ.
Cooker blast case, NIA officers take Bomber Mohammed Shariq to Shivamogga for spot Mahazar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm