ಬ್ರೇಕಿಂಗ್ ನ್ಯೂಸ್
08-03-23 03:22 pm HK News Desk ಕರ್ನಾಟಕ
ಶಿವಮೊಗ್ಗ, ಮಾ.8 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಮತ್ತು ಪೊಲೀಸರು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಮತ್ತು ಶಿವಮೊಗ್ಗ ಆಸುಪಾಸಿನಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ಮಾಡಿದ್ದ ಪ್ರಕರಣದಲ್ಲಿಯೂ ಶಾರೀಕ್ ಆರೋಪಿಯಾಗಿದ್ದು ಆ ಹಿನ್ನೆಲೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖನಾಗಿದ್ದಾನೆ. ಎರಡು ದಿನಗಳ ಹಿಂದೆ ಆತನನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರೀಕ್ ನಿವಾಸದ ಬಳಿ ಒಯ್ದು ತನಿಖೆ ನಡೆಸಿದ್ದಾರೆ. ಈ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರು ನಡೆಸಿದ್ದಾರೆ. ಶಾರೀಕ್, ಮಾಝ್ ಮುನೀರ್, ಸಯ್ಯದ್ ಯಾಸೀನ್ ಸೇರಿಕೊಂಡು ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಮಾಡಿರುವುದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಯಲಾಗಿತ್ತು. ಮಾಝ್, ಯಾಸಿನ್ ಪೊಲೀಸರ ಬಲೆಗೆ ಬಿದ್ದಿದ್ದರೆ, ಶಾರೀಕ್ ತಲೆಮರೆಸಿಕೊಂಡಿದ್ದ. ಆನಂತರ ಮೈಸೂರಿನಲ್ಲಿ ಹೆಸರು ಬದಲಿಸಿ ಅಡಗಿಕೊಂಡಿದ್ದ. ಅಲ್ಲಿಂದಲೇ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಹಿಡಿದು ತಂದಿದ್ದಾಗ ಬ್ಲಾಸ್ಟ್ ಆಗಿತ್ತು. ಹಾಗಾಗಿ ಬಾಂಬ್ ಟ್ರಯಲ್ ಮಾಡಿದ್ದ ಜಾಗಕ್ಕೆ ಶಾರೀಕ್ ನನ್ನು ಶಿವಮೊಗ್ಗ ಪೊಲೀಸರು ಕರೆದೊಯ್ದು ತನಿಖೆ ನಡೆಸಿದ್ದಾರೆ.
Cooker blast case, NIA officers take Bomber Mohammed Shariq to Shivamogga for spot Mahazar.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:18 pm
Mangalore Correspondent
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm