ಬ್ರೇಕಿಂಗ್ ನ್ಯೂಸ್
08-03-23 03:22 pm HK News Desk ಕರ್ನಾಟಕ
ಶಿವಮೊಗ್ಗ, ಮಾ.8 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಮತ್ತು ಪೊಲೀಸರು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಮತ್ತು ಶಿವಮೊಗ್ಗ ಆಸುಪಾಸಿನಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ಮಾಡಿದ್ದ ಪ್ರಕರಣದಲ್ಲಿಯೂ ಶಾರೀಕ್ ಆರೋಪಿಯಾಗಿದ್ದು ಆ ಹಿನ್ನೆಲೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖನಾಗಿದ್ದಾನೆ. ಎರಡು ದಿನಗಳ ಹಿಂದೆ ಆತನನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರೀಕ್ ನಿವಾಸದ ಬಳಿ ಒಯ್ದು ತನಿಖೆ ನಡೆಸಿದ್ದಾರೆ. ಈ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರು ನಡೆಸಿದ್ದಾರೆ. ಶಾರೀಕ್, ಮಾಝ್ ಮುನೀರ್, ಸಯ್ಯದ್ ಯಾಸೀನ್ ಸೇರಿಕೊಂಡು ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಮಾಡಿರುವುದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಯಲಾಗಿತ್ತು. ಮಾಝ್, ಯಾಸಿನ್ ಪೊಲೀಸರ ಬಲೆಗೆ ಬಿದ್ದಿದ್ದರೆ, ಶಾರೀಕ್ ತಲೆಮರೆಸಿಕೊಂಡಿದ್ದ. ಆನಂತರ ಮೈಸೂರಿನಲ್ಲಿ ಹೆಸರು ಬದಲಿಸಿ ಅಡಗಿಕೊಂಡಿದ್ದ. ಅಲ್ಲಿಂದಲೇ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಹಿಡಿದು ತಂದಿದ್ದಾಗ ಬ್ಲಾಸ್ಟ್ ಆಗಿತ್ತು. ಹಾಗಾಗಿ ಬಾಂಬ್ ಟ್ರಯಲ್ ಮಾಡಿದ್ದ ಜಾಗಕ್ಕೆ ಶಾರೀಕ್ ನನ್ನು ಶಿವಮೊಗ್ಗ ಪೊಲೀಸರು ಕರೆದೊಯ್ದು ತನಿಖೆ ನಡೆಸಿದ್ದಾರೆ.
Cooker blast case, NIA officers take Bomber Mohammed Shariq to Shivamogga for spot Mahazar.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am