ಬ್ರೇಕಿಂಗ್ ನ್ಯೂಸ್
08-03-23 06:58 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.8 : ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳೆಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಮತ್ತು ಅವರಿಗೆ ಜಾಮೀನು ಸಿಗುತ್ತಲೇ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದನ್ನು ಜೆಡಿಎಸ್ ವ್ಯಂಗ್ಯ ಮತ್ತು ಕಟು ಶಬ್ದಗಳಲ್ಲಿ ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕನನ್ನು ಬಿಜೆಪಿ ಕಾರ್ಯಕರ್ತರು 'ಭಾರತ್ ಮಾತಾ ಕಿ ಜೈ' ಎಂದು ಕೂಗುತ್ತಾ ಅದ್ದೂರಿ ಮೆರವಣಿಗೆ ಮಾಡಿದ್ದಾರೆ. ಭ್ರಷ್ಟರಿಗೆ ಜೈಕಾರ ಹಾಕುವುದೇ ಬಿಜೆಪಿ ಇಂಡಿಯಾ ಹೇಳುವ ದೇಶ ಪ್ರೇಮ. ನಿಮ್ಮ ನಾಚಿಕೆಯಿಲ್ಲದ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಜೆಡಿಎಸ್ ಛೀಮಾರಿ ಹಾಕಿದೆ.

ನಾಪತ್ತೆಯಾಗಿದ್ದ ಶಾಸಕ ಜಾಮೀನು ಸಿಗುತ್ತಿದ್ದಂತೆ ಪ್ರತ್ಯಕ್ಷರಾಗಿದ್ದಾರೆ. ಆರಗ ಜ್ಞಾನೇಂದ್ರ ಅವರೇ ನಾಪತ್ತೆಯಾಗಿದ್ದ ವೇಳೆ ಅವರು ಎಲ್ಲಿದ್ದರು ಎಂದು ನಿಮಗೆ ಗೊತ್ತಿರಲಿಲ್ಲವೇ ? ಜನರಿಗೆ ಎಷ್ಟು ಮಂಕುಬೂದಿ ಎರಚಬಲ್ಲಿರಿ? ಈ ಬಾರಿ ನಿಮ್ಮೆಲ್ಲರನ್ನೂ ಮನೆಯಲ್ಲಿ ಕೂರುವಂತೆ ಜನತೆ ಮಾಡಲಿದ್ದಾರೆ ನೆನಪಿರಲಿ ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.
ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರೇ ನೀವು ಪದೇ ಪದೇ ರಾಜ್ಯಕ್ಕೆ ಬರುತ್ತಿರುವುದು ಮಾಡಾಳು ವಿರೂಪಾಕ್ಷ ಅವರ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ಎಂದು ಜನರು ಮಾತನಾಡುತ್ತಿದ್ದಾರೆ. ಈ ಬಗ್ಗೆ ಮುಂದಿನ ಬಾರಿ ಬಂದಾಗ ಸ್ಪಷ್ಟೀಕರಣ ನೀಡಿ ಎಂದು ಜೆಡಿಎಸ್ ಒತ್ತಾಯಿಸಿದೆ.
ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ.#ಕಮೀಷನ್_ರಾಜ್ಯವಲ್ಲ_ಕರ್ನಾಟಕ pic.twitter.com/VziwH5RQuf
— Janata Dal Secular (@JanataDal_S) March 8, 2023
Jds mocks celebration of BJP MLA Madal Virupakshappa, taunts him. The Advocates’ Association, Bengaluru, has expressed concern over quick posting of the interim anticipatory bail application of BJP MLA Madal Virupakshappa, facing charges of collecting bribes through his son Prashanth Kumar M V.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 09:58 pm
Mangalore Correspondent
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm