ಬ್ರೇಕಿಂಗ್ ನ್ಯೂಸ್
08-03-23 09:53 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 08: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ 'ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆ'ಗೆ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದ 500 ಕೋಟಿ ರೂಪಾಯಿ ವಿಶೇಷ ಸಮುದಾಯ ಬಂಡವಾಳ ನಿಧಿ ಪೈಕಿ ಮೊದಲ ಹಂತದಲ್ಲಿ ರೂ 100 ಕೋಟಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶೇಷ ಸಮುದಾಯ ಬಂಡವಾಳ ನಿಧಿಯ ಉಳಿದ ಹಣವನ್ನು ಮುಂದಿನ ಪ್ರತಿವಾರ ಕಂತುಗಳಲ್ಲಿ ಬಿಡುಗಡೆಗೊಳಿಸಿ, ಏಪ್ರಿಲ್ ತಿಂಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಾಲನೆ ಕೊಡಲಾಗುವುದು ಎಂದಿದ್ದಾರೆ.
ಈ ಯೋಜನೆಯಡಿ 500 ಕೋಟಿ ರೂಪಾಯಿ ಹಣವನ್ನು 50,000 ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷದಂತೆ ನೀಡುವುದು ಸರ್ಕಾರದ ಗುರಿ. ಈಗ ಮೊದಲ ಹಂತದ 100 ಕೋಟಿಯಲ್ಲಿ 9,890 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ತಲಾ 1 ಲಕ್ಷ ರೂಪಾಯಿಯನ್ನು ಕೊಡಲಾಗಿದೆ. ಇದರ ಜೊತೆಗೆ 11 ಕ್ಯಾಂಟೀನ್, 9 ಸ್ಯಾನಿಟರಿ ಪ್ಯಾಡ್, 24 ಚಿಕ್ಕಿ ಘಟಕ ಸೇರಿ 44 ಘಟಕಗಳಿಗೆ ತಲಾ 2.5 ಲಕ್ಷ ಕೊಡಲಾಗಿದೆ. ಫಲಾನುಭವಿ ಸಂಘಗಳ ಖಾತೆಗೆ ನೇರವಾಗಿ ಆನ್ ಲೈನ್ ಮೂಲಕ ಜಮೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
International womens day CM Basavaraj Bommai launches new scheme.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 06:21 pm
HK News Desk
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm