ಬ್ರೇಕಿಂಗ್ ನ್ಯೂಸ್
23-10-20 12:28 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 23: ಕೊನೆಗೂ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಂಪುಟ ಸಚಿವರ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದು, ನವೆಂಬರ್ 17ರಿಂದ ಕಾಲೇಜು ಆರಂಭಿಸಲು ನಿರ್ಧಾರಕ್ಕೆ ಬಂದಿದ್ದಾರೆ.
ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೂ ಮತ್ತು ಡಿಸಿಎಂ ಆಗಿರುವ ಡಾ.ಅಶ್ವತ್ಥ ನಾರಾಯಣ, ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಕೋವಿಡ್ ನಿಯಮ ಮತ್ತು ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜು ನಡೆಸಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಮೊದಲಿಗೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಒಟ್ಟು ಪಠ್ಯದಲ್ಲಿ 33 ಶೇಕಡಾದಷ್ಟು ಪಠ್ಯವನ್ನು ಕಡಿತ ಮಾಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಪ್ರಥಮ ಮತ್ತು ದ್ವಿತೀಯ ಪಿಯು ವಿಭಾಗದಲ್ಲಿ ವಿಜ್ಞಾನ ವಿಭಾಗದ ಫಿಸಿಕ್ಸ್ , ಕೆಮಿಸ್ಟ್ರಿ ಮತ್ತು ಗಣಿತ ಶಾಸ್ತ್ರ ವಿಷಯದಲ್ಲಿ ಪಠ್ಯ ಕಡಿತ ಮಾಡುವುದು ಬೇಡ ಎಂದು ಪಠ್ಯ ಪುಸ್ತಕ ರಚನಾ ಸಮಿತಿಯ ಸದಸ್ಯರು ಪ್ರಸ್ತಾಪ ಇಟ್ಟಿದ್ದಾರೆ. ಕಾಲೇಜು ಆರಂಭ ವಿಚಾರದಲ್ಲಿ ಯಾವೆಲ್ಲ ಸೂಚನೆ ಪಾಲಿಸಬೇಕು ಮತ್ತು ಕಲಿಕಾ ಪಠ್ಯಗಳ ಬಗ್ಗೆ ಇನ್ನೆರಡು ದಿನದಲ್ಲಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.
ಕಳೆದ ಏಳು ತಿಂಗಳ ಬಳಿಕ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಮಾರ್ಚ್ 22ರಂದು ಲಾಕ್ಡೌನ್ ಘೋಷಣೆಯಾದ ಬಳಿಕ ಶಾಲೆ, ಕಾಲೇಜುಗಳು ಸ್ಥಗಿತಗೊಂಡಿದ್ದವು. ಆನಂತರ ಕೆಲವು ವಿಭಾಗದ ಪರೀಕ್ಷೆಗಳನ್ನೂ ಅರ್ಧಕ್ಕೆ ಕಡಿತಗೊಳಿಸಲಾಗಿತ್ತು. ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳಿಗೆ ಕಳೆದ ತಿಂಗಳಷ್ಟೇ ಅಂತಿಮ ಪರೀಕ್ಷೆಗಳನ್ನು ಪೂರ್ತಿ ಮಾಡಲಾಗಿತ್ತು. ಈಗ ಕಾಲೇಜುಗಳಲ್ಲಿ ಅಡ್ಮಿಶನ್ ಪ್ರಕ್ರಿಯೆ ನಡೆಯುತ್ತಿದ್ದು, ಮೊದಲಿಗೆ ಉನ್ನತ ಶಿಕ್ಷಣ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ನವೆಂಬರ್ ತಿಂಗಳಾಂತ್ಯಕ್ಕೆ ಡಿಸೆಂಬರ್ ನಲ್ಲಿ ಪಿಯು ಮತ್ತು ಪ್ರೌಢಶಾಲೆ ಆರಂಭಗೊಳ್ಳುವ ಸಾಧ್ಯತೆಯಿದೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am