ಬ್ರೇಕಿಂಗ್ ನ್ಯೂಸ್
10-03-23 01:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.10: ಹೆಚ್ 3ಎನ್ 2 ವೈರಸ್ ಸೋಂಕಿಗೆ ಹಾಸನ ಜಿಲ್ಲೆಯ ಈರೇಗೌಡ ಎಂಬ 82 ವರ್ಷದ ವೃದ್ಧ ವ್ಯಕ್ತಿ ಬಲಿಯಾಗಿದ್ದಾರೆ. ಮಾರ್ಚ್ 6ರಂದು ಇವರು ಮೃತಪಟ್ಟಿದ್ದು, ಹೆಚ್3ಎನ್2 ವೈರಸ್ಗೆ ಎಂಬುದು ದೃಢಪಟ್ಟಿದೆ, ಈ ಮೂಲಕ ಹೊಸ ವೈರಸ್ ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಸಾವಾಗಿದೆ.
ದೇಶದಲ್ಲಿ H3N2 ವೈರಸ್ನಿಂದ ಉಂಟಾದ ಮೊದಲ ಎರಡು ಸಾವುಗಳು ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ., ಒಬ್ಬರು ಕರ್ನಾಟಕದವರು ಮತ್ತು ಇನ್ನೊಂದು ಹರಿಯಾಣದವರು. ಈರೇಗೌಡ ಫೆಬ್ರವರಿ 24 ರಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ವೈರಸ್ ಸೋಂಕಿನ ರೀತಿಯ ರೋಗ ಲಕ್ಷಣಗಳೊಂದಿಗೆ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.
ಈರೇಗೌಡರ ಕುಟುಂಬ ಸದಸ್ಯರು ಮತ್ತು ಸಂಪರ್ಕದ ವ್ಯಕ್ತಿಗಳನ್ನು ಆರೋಗ್ಯ ಸಿಬಂದಿ ಸಮೀಕ್ಷೆ ಮಾಡಿದ್ದಾರೆ. ಅವರ ಪತ್ನಿ ಸೇರಿದಂತೆ ಎಲ್ಲರಿಗೂ ವೈರಸ್ ನೆಗೆಟಿವ್ ಬಂದಿದೆ. ಮುಂದಿನ 14 ದಿನಗಳವರೆಗೆ ಪ್ರದೇಶದಲ್ಲಿ ಕಣ್ಗಾವಲು ಮುಂದುವರಿಸಲು ಯೋಜಿಸಿದ್ದಾರೆ.
ಈ ಹಿಂದೆ ಕೋವಿಡ್ -19 ನಿಂದ ಬಳಲುತ್ತಿರುವ ಜನರು H3N2 ಸೋಂಕಿಗೆ ಒಳಗಾದ ವೇಳೆ ಹೆಚ್ಚು ಕೆಮ್ಮು ಲಕ್ಷಣ ಅನುಭವಿಸಿದ್ದರು. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಸೋಂಕಿನ ಲಕ್ಷಣ ಕಂಡುಬರುತ್ತವೆ. ಗರ್ಭಿಣಿಯರು ಸಹ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು. ಕಟ್ಟುನಿಟ್ಟಾದ ನೈರ್ಮಲ್ಯ ಮತ್ತು ಸಾಮಾಜಿಕ ಅಂತರವನ್ನು ಅನುಸರಿಸುವ ಮೂಲಕ ಸೋಂಕು ಹರಡುವುದನ್ನು ತಡೆಯಬಹುದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಕೆಮ್ಮು, ಜ್ವರ ಹಾಗೂ ಕೋವಿಡ್ ರೀತಿಯ ರೋಗಲಕ್ಷಣದ ಎಚ್3ಎನ್2 ಸೋಂಕಿನ 26 ಪ್ರಕರಣಗಳು ಪತ್ತೆಯಾಗಿವೆ.
An 82-year-old man in Karnataka's Hassan is believed to be the first to die of H3N2 in the country. Hire Gowda was admitted to hospital on February 24 and died on March 1, according to officials. He was reportedly a diabetic and suffered from hypertension.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm